BJP 
ದೇಶ

ಚುನಾವಣಾ ಬಾಂಡ್ ನಿಷೇಧ ತೀರ್ಪಿನ ಬಗ್ಗೆ ಕೊನೆಗೂ ಪ್ರತಿಕ್ರಿಯೆ ನೀಡಿದ ಆಡಳಿತಾರೂಢ ಬಿಜೆಪಿ

ಚುನಾವಣಾ ಬಾಂಡ್ ನಿಷೇಧಿಸಿರುವ ಸುಪ್ರೀಂ ಕೋರ್ಟ್ ತಿರ್ಪನ್ನು ವಿಪಕ್ಷಗಳು ಸ್ವಾಗತಿಸಿದ್ದರೆ, ಬಿಜೆಪಿ ಕೊನೆಗೂ ಪ್ರತಿಕ್ರಿಯೆ ನೀಡಿದೆ.

ನವದೆಹಲಿ: ಚುನಾವಣಾ ಬಾಂಡ್ ನಿಷೇಧಿಸಿರುವ ಸುಪ್ರೀಂ ಕೋರ್ಟ್ ತಿರ್ಪನ್ನು ವಿಪಕ್ಷಗಳು ಸ್ವಾಗತಿಸಿದ್ದರೆ, ಬಿಜೆಪಿ ಕೊನೆಗೂ ಪ್ರತಿಕ್ರಿಯೆ ನೀಡಿದೆ.

ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ನಿಷೇಧಿಸಿ ನೀಡಿರುವ ತೀರ್ಪನ್ನು ವಿಪಕ್ಷಗಳು ರಾಜಕೀಯಗೊಳಿಸುತ್ತಿವೆ ಎಂದು ಆರೋಪಿಸಿದೆ. ಸುಪ್ರೀಂ ಕೋರ್ಟ್ ನ ಪ್ರತಿಯೊಂದು ತೀರ್ಪನ್ನೂ ಗೌರವಿಸಬೇಕು ಎಂದು ಬಿಜೆಪಿ ಹೇಳಿದೆ.

ಕೋರ್ಟ್ ತೀರ್ಪಿನ ಬಗ್ಗೆ ಮಾತನಾಡಿರುವ ಬಿಜೆಪಿ ವಕ್ತಾರ ನಳಿನ್ ಕೊಹ್ಲಿ, ವಿಪಕ್ಷಗಳ ಬಳಿ ಪ್ರಧಾನಿ ಮೋದಿಗೆ ಪರ್ಯಾಯವಾದ ನಾಯಕತ್ವ ಇಲ್ಲ ಆದ್ದರಿಂದ ಈ ವಿಷಯವನ್ನೂ ವಿಪಕ್ಷಗಳು ರಾಜಕೀಯಗೊಳಿಸುತ್ತಿವೆ ಎಂದು ಆರೋಪಿಸಿದ್ದಾರೆ. ಸರ್ಕಾರ ಚುನಾವಣೆಯಲ್ಲಿ ಕಪ್ಪು ಹಣದ ಹರಿವನ್ನು ನಿಗ್ರಹಿಸುವುದಕ್ಕಾಗಿ ಚುನಾವಣಾ ಬಾಂಡ್ ಗಳನ್ನು ಜಾರಿಗೆ ತಂದಿತ್ತು.

ಇದು ಹಲವು ದಶಕಗಳ ಪಯಣವಾಗಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿ ಕಪ್ಪು ಹಣ ನುಸುಳುವುದನ್ನು ತಡೆಯುವುದು ಹೇಗೆ ಎಂಬ ಕಾಳಜಿಯ ಚಿಂತನೆಯಾಗಿತ್ತು ಎಂದು ಬಿಜೆಪಿ ನಾಯಕ ಹೇಳಿದ್ದಾರೆ. "ಕೊಡುಗೆದಾರರ ಗುರುತಿನ ಬಗ್ಗೆ ಕಾಳಜಿಯನ್ನು ಇಟ್ಟುಕೊಂಡು, ಒಂದು (ಚುನಾವಣಾ ಬಾಂಡ್) ಯೋಜನೆ ಬಂದಿತ್ತು. ಈ ಸ್ವರೂಪದಲ್ಲಿ ಈ ಯೋಜನೆ ಇರಲು ಸಾಧ್ಯವಿಲ್ಲ" ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಆದ್ದರಿಂದ, ಕೆಲವು ನಿರ್ದೇಶನಗಳನ್ನು ನೀಡಿದೆ" ಎಂದು ನಳಿನ್ ಕೊಹ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT