ಫಾರೂಕ್ ಅಬ್ದುಲ್ಲಾ 
ದೇಶ

INDIAಗೆ ಮತ್ತೊಂದು ಹಿನ್ನಡೆ: ಲೋಕಸಭೆ ಚುನಾವಣೆಯಲ್ಲಿ ಎನ್‌ಸಿ ಏಕಾಂಗಿ ಸ್ಪರ್ಧೆ

“ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ, ಎನ್‌ಸಿ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ.

ಶ್ರೀನಗರ: ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾಗುವುದಿಲ್ಲ ಎಂಬ ಸುಳಿವು ನೀಡಿದ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಮತ್ತು ಮೂರು ಬಾರಿ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿಯಾಗಿದ್ದ ಫಾರೂಕ್ ಅಬ್ದುಲ್ಲಾ ಅವರು, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಗುರುವಾರ ಹೇಳಿದ್ದಾರೆ.

ಶ್ರೀನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಬ್ದುಲ್ಲಾ ಅವರು, “ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ, ಎನ್‌ಸಿ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಇದರಲ್ಲಿ ಯಾವುದೇ ಸಂದೇಹವಿಲ್ಲ ಎಂದಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಐದು ಲೋಕಸಭಾ ಸ್ಥಾನಗಳಿದ್ದು, ಎನ್‌ಸಿ ಮೂರು ಮತ್ತು ಬಿಜೆಪಿ ಎರಡು (ಜಮ್ಮುವಿನಿಂದ ಎರಡೂ ಸ್ಥಾನಗಳು) ಸ್ಥಾನಗಳನ್ನು ಗೆದ್ದಿತ್ತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆ ಏಕಕಾಲದಲ್ಲಿ ನಡೆಯಲಿದೆ ಎಂಬ ಭರವಸೆ ಇದೆ ಎಂದು ಅಬ್ದುಲ್ಲಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್