ಫಾರೂಕ್ ಅಬ್ದುಲ್ಲಾ 
ದೇಶ

INDIAಗೆ ಮತ್ತೊಂದು ಹಿನ್ನಡೆ: ಲೋಕಸಭೆ ಚುನಾವಣೆಯಲ್ಲಿ ಎನ್‌ಸಿ ಏಕಾಂಗಿ ಸ್ಪರ್ಧೆ

“ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ, ಎನ್‌ಸಿ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ.

ಶ್ರೀನಗರ: ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾಗುವುದಿಲ್ಲ ಎಂಬ ಸುಳಿವು ನೀಡಿದ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಮತ್ತು ಮೂರು ಬಾರಿ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿಯಾಗಿದ್ದ ಫಾರೂಕ್ ಅಬ್ದುಲ್ಲಾ ಅವರು, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಗುರುವಾರ ಹೇಳಿದ್ದಾರೆ.

ಶ್ರೀನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಬ್ದುಲ್ಲಾ ಅವರು, “ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ, ಎನ್‌ಸಿ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಇದರಲ್ಲಿ ಯಾವುದೇ ಸಂದೇಹವಿಲ್ಲ ಎಂದಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಐದು ಲೋಕಸಭಾ ಸ್ಥಾನಗಳಿದ್ದು, ಎನ್‌ಸಿ ಮೂರು ಮತ್ತು ಬಿಜೆಪಿ ಎರಡು (ಜಮ್ಮುವಿನಿಂದ ಎರಡೂ ಸ್ಥಾನಗಳು) ಸ್ಥಾನಗಳನ್ನು ಗೆದ್ದಿತ್ತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆ ಏಕಕಾಲದಲ್ಲಿ ನಡೆಯಲಿದೆ ಎಂಬ ಭರವಸೆ ಇದೆ ಎಂದು ಅಬ್ದುಲ್ಲಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಳ ಮೀಸಲಾತಿಗೆ ಮೂರು ಸೂತ್ರ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಯಾರಿಗೆ ಎಷ್ಟು?

ಅದಕ್ಕಾಗಿ ನಾನು ತಮನ್ನಾ ಭಾಟಿಯಾ ಕಾಲಿಗೆ ಬೀಳಲು ಸಿದ್ಧ: ಬಾಲಿವುಡ್ ನಟ ಅನ್ನು ಕಪೂರ್

IPL 2026: ವಿರಾಟ್ ಕೊಹ್ಲಿ, ಪಡಿಕ್ಕಲ್ ಅಬ್ಬರಕ್ಕೆ GT ತತ್ತರ; RCB ಭರ್ಜರಿ ಗೆಲುವು

ಮಣಿಪಾಲದಲ್ಲಿ ಇದೆಂಥಾ ಅಸಹ್ಯ: ರಸ್ತೆಯಲ್ಲೇ ರೊಮ್ಯಾನ್ಸ್; ಉತ್ತರ ಭಾರತ ಜೋಡಿಗೆ ಕನ್ನಡದಲ್ಲೇ ಉಗಿದ ಸ್ಥಳೀಯರು, Video!

ರಾಘವ್ ಚಡ್ಡಾ, ಇತರರು ಎಎಪಿ ಬಿಟ್ಟು ಹೋಗುತ್ತಿರಲಿಲ್ಲ...: ಅಣ್ಣಾ ಹಜಾರೆ ಸ್ಫೋಟಕ ಹೇಳಿಕೆ

SCROLL FOR NEXT