ಕಾಂಗ್ರೆಸ್ 
ದೇಶ

ಚುನಾವಣಾ ಬಾಂಡ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಕಾಂಗ್ರೆಸ್ ಹೇಳಿದ್ದೇನೆಂದರೆ...

ಚುನಾವಣಾ ಬಾಂಡ್ ಗಳನ್ನು ನಿಷೇಧಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸಿದೆ.

ನವದೆಹಲಿ: ಚುನಾವಣಾ ಬಾಂಡ್ ಗಳನ್ನು ನಿಷೇಧಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸಿದ್ದು, ಮತಗಳನ್ನು ಹಣಕ್ಕಿಂತ ಶಕ್ತಿಶಾಲಿಯನ್ನಾಗಿಸುತ್ತದೆ ಎಂದು ತೀರ್ಪನ್ನು ವಿಶ್ಲೇಷಿಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ (Jairam Ramesh) "ಹೆಚ್ಚು ಪ್ರಚಾರ ಪಡೆದಿದ್ದ, ಮೋದಿ ಸರ್ಕಾರದ ಚುನಾವಣಾ ಬಾಂಡ್ ಯೋಜನೆಯನ್ನು ಅಸಾಂವಿಧಾನಿಕ ಹಾಗೂ ಸಂಸತ್ ನಲ್ಲಿ ಅಂಗೀಕರಿಸಿದ್ದ ಕಾನೂನನ್ನು ಉಲ್ಲಂಘನೆ ಮಾಡುತ್ತದೆ" ಎಂದು ಸುಪ್ರೀಂ ಕೋರ್ಟ್ ಹೇಳಿರುವುದನ್ನು ಉಲ್ಲೇಖಿಸಿದ್ದಾರೆ.

ಬಹುನಿರೀಕ್ಷಿತ ತೀರ್ಪು ಸ್ವಾಗತಾರ್ಹವಾಗಿದ್ದು, ಮತಗಳನ್ನು ನೋಟುಗಳಿಗಿಂತ ಬಲಪಡಿಸುತ್ತದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. ಮೋದಿ ಸರ್ಕಾರ ಅನ್ನದಾತರಿಗೆ ಅನ್ಯಾಯದ ಮೇಲೆ ಅನ್ಯಾಯ ಮಾಡುತ್ತಿದೆ, ಚಂದಾದಾತರಿಗೆ ಮಾತ್ರ ಹೆಚ್ಚಿನ ಸವಲತ್ತು ಒದಗಿಸುತ್ತಿದೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ. ಮೋದಿ ಸರ್ಕಾರ ಅನ್ನದಾತರಿಗೆ ಅನ್ಯಾಯದ ಮೇಲೆ ಅನ್ಯಾಯ ಮಾಡುತ್ತಿದೆ, ಚಂದಾದಾತರಿಗೆ ಮಾತ್ರ ಹೆಚ್ಚಿನ ಸವಲತ್ತು ಒದಗಿಸುತ್ತಿದೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಚುನಾವಣಾ ಬಾಂಡ್ ಗಳದ್ದಷ್ಟೇ ಅಲ್ಲದೇ ವಿವಿ ಪ್ಯಾಟ್ ವಿಷಯವಾಗಿ ರಾಜಕೀಯ ಪಕ್ಷಗಳನ್ನು ಭೇಟಿ ಮಾಡುವುದಕ್ಕೂ ನಿರಾಕರಿಸುತ್ತಿರುವ ಚುನಾವಣಾ ಆಯೋಗದ ನಡೆಯನ್ನು ಕೋರ್ಟ್ ಗಮನಿಸುತ್ತದೆ ಎಂಬ ವಿಶ್ವಾಸವನ್ನು ಜೈರಾಮ್ ರಮೇಶ್ ವ್ಯಕ್ತಪಡಿಸಿದ್ದಾರೆ.ಮತದಾನ ಪ್ರಕ್ರಿಯೆಯಲ್ಲಿ ಎಲ್ಲವೂ ಪಾರದರ್ಶಕವಾಗಿದ್ದರೆ ಈ ಹಠಮಾರಿತನ ಏಕೆ? ಎಂದು ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ. ಚುನಾವಣಾ ಬಾಂಡ್ ಯೋಜನೆ ಸಂವಿಧಾನದ ಅಡಿಯಲ್ಲಿ ಮಾಹಿತಿ ಹಕ್ಕು ಮತ್ತು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!