ದೇಶ

ಪಕ್ಷದ ಬ್ಯಾಂಕ್​ ಖಾತೆಗಳು ಸ್ಥಗಿತಗೊಂಡಿವೆ, ವಿದ್ಯುತ್ ಬಿಲ್ ಕಟ್ಟಲೂ ಹಣವಿಲ್ಲ, ನ್ಯಾಯಮಂಡಳಿಗೆ ದೂರು: ಕಾಂಗ್ರೆಸ್​

ಚುನಾವಣಾ ಬಾಂಡ್ ವಿಚಾರವಾಗಿ ಸುಪ್ರೀಂ ಕೋರ್ಟ್ ತೀಪ್ರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ದ ಮುಗಿಬಿದ್ದಿದ್ದ ಕಾಂಗ್ರೆಸ್ ಪಕ್ಷಕ್ಕೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದ್ದು, ಪಕ್ಷದ ಎಲ್ಲ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಎನ್ನಲಾಗಿದೆ.

ನವದೆಹಲಿ: ಚುನಾವಣಾ ಬಾಂಡ್ ವಿಚಾರವಾಗಿ ಸುಪ್ರೀಂ ಕೋರ್ಟ್ ತೀಪ್ರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ದ ಮುಗಿಬಿದ್ದಿದ್ದ ಕಾಂಗ್ರೆಸ್ ಪಕ್ಷಕ್ಕೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದ್ದು, ಪಕ್ಷದ ಎಲ್ಲ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಎನ್ನಲಾಗಿದೆ.

ಈ ಬಗ್ಗೆ ಸ್ವತಃ ಕಾಂಗ್ರೆಸ್ ಪಕ್ಷದ ವಕ್ತಾರ ಹಾಗೂ ಹಿರಿಯ ನಾಯಕ ಅಜಯ್ ಮಕೇನ್ ಮಾಹಿತಿ ನೀಡಿದ್ದು, ಈ ಕುರಿತು ನಡೆದ ಸುದ್ದಿಗೊಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿದರು. 'ಪಕ್ಷದ ಎಲ್ಲಾ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ವಿದ್ಯುತ್ ಬಿಲ್ ಪಾವತಿ ಮಾಡಲೂ ಹಣವಿಲ್ಲ. ಭಾರತದಲ್ಲಿ ಪ್ರಜಾಪ್ರಭುತ್ವ ಸಂಪೂರ್ಣ ಅಂತ್ಯಗೊಂಡಿದೆ. ಭಾರತದಲ್ಲಿ ಪ್ರಜಾಪ್ರಭುತ್ವ ಸಂಪೂರ್ಣ ಅಂತ್ಯಗೊಂಡಿದೆ. ಬ್ಯಾಂಕ್‌ನಲ್ಲಿ ವಿಚಾರಿಸಿದಾಗ ಕಾಂಗ್ರೆಸ್ ಪಕ್ಷದ ಎಲ್ಲಾ ಖಾತೆಗಳನ್ನು ಸ್ಥಗಿತಗೊಳಿಸಿರುವುದು ತಿಳಿದು ಬಂದಿದೆ. ಅಚ್ಚರಿಯ ಸಂಗತಿ ಎಂದರೆ ಚುನಾವಣೆ ಘೋಷಣೆಗೆ ಎರಡು ವಾರ ಬಾಕಿ ಇರುವಾಗ ನಮ್ಮ ಖಾತೆಗಳನ್ನು ಫ್ರೀಜ್ ಮಾಡಿ ಈ ಸರ್ಕಾರ ಏನು ಮಾಡಲು ಪ್ರಯತ್ನಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

'ನಮ್ಮ ಪಕ್ಷದ ಖಾತೆಯನ್ನು ಫ್ರೀಜ್ ಮಾಡಲು ಕಾರಣ ಹಾಸ್ಯಾಸ್ಪದವಾಗಿದೆ. ನಿನ್ನೆ ಸಂಜೆ ಯುವ ಕಾಂಗ್ರೆಸ್ ಖಾತೆಗಳನ್ನೂ ಸ್ಥಗಿತಗೊಳಿಸಲಾಗಿದ್ದು, ಕಾಂಗ್ರೆಸ್ 210 ಕೋಟಿ ರೂ. ಹಣ ಪಡೆದಿದೆ, ಈ ಹಣ ಯಾವುದೇ ದೊಡ್ಡ ಉದ್ಯಮಿಗೆ ಸೇರಿಲ್ಲ. ನಾವು ಸಂಗ್ರಹಿಸಿದ ಆನ್‌ಲೈನ್ ದೇಣಿಗೆಗೆ ಸೇರಿದೆ. ದೇಶದ ಜನರು ಯುಪಿಐ ಮೂಲಕ ನಮಗೆ ಹಣ ನೀಡಿದ್ದಾರೆ. ಆ ಹಣವನ್ನು ಆದಾಯ ತೆರಿಗೆ ಇಲಾಖೆ ಸ್ಥಗಿತಗೊಳಿಸಿದೆ. ನಮ್ಮ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಇನ್ನೊಂದೆಡೆ ಬಿಜೆಪಿ ಚುನಾವಣಾ ಬಾಂಡ್ ಹಣವನ್ನು ಖರ್ಚು ಮಾಡುತ್ತಿದೆ, ಅದನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ನಮ್ಮ ಪ್ರಜಾಪ್ರಭುತ್ವದಲ್ಲಿ ಒಂದೇ ಪಕ್ಷ ಇರುವುದಾ, ಉಳಿದವರೆಲ್ಲರ ಖಾತೆಗಳು ಸ್ಥಗಿತಗೊಳ್ಳುತ್ತವೆಯೇ, ಉಳಿದ ಪಕ್ಷಗಳಿಗೆ ಅಸ್ತಿತ್ವದಲ್ಲಿರಲು ಹಕ್ಕಿಲ್ಲವೇ ಎಂದು ಕಿಡಿಕಾರಿದ್ದಾರೆ.

ವಿದ್ಯುತ್ ಬಿಲ್ ಕಟ್ಟಲೂ ಹಣವಿಲ್ಲ

ಸದ್ಯ, ನಮ್ಮ ಬಳಿ ಖರ್ಚು ಮಾಡಲು ಹಣವಿಲ್ಲ. ವಿದ್ಯುತ್ ಬಿಲ್‌ಗಳು, ಸಿಬ್ಬಂದಿ ಸಂಬಳ, ನಮ್ಮ ನ್ಯಾಯ ಯಾತ್ರೆ, ಎಲ್ಲವೂ ಪರಿಣಾಮ ಬೀರಿದೆ. ಮನಮೋಹನ್ ಸಿಂಗ್ ಸಮಿತಿಯ ವರದಿಯ ಆಧಾರದ ಮೇಲೆ ಕೊಡುಗೆ ನೀಡಿದ ಎಲ್ಲಾ ಶಾಸಕರು ಮತ್ತು ಸಂಸದರ ಹೆಸರನ್ನು ನಾವು ನೀಡಿದ್ದೇವೆ. ಆದರೂ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರವೇ ಅಡ್ಡಿ ಸೃಷ್ಟಿಸುತ್ತಿದೆ: DCM ಡಿ.ಕೆ. ಶಿವಕುಮಾರ್

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

SCROLL FOR NEXT