ಸಾಂದರ್ಭಿಕ ಚಿತ್ರ  
ದೇಶ

ಇಂದಿನಿಂದ ಎರಡು ದಿನ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಮಾವೇಶ

ಲೋಕಸಭೆ ಚುನಾವಣೆ ಗೆಲ್ಲುವ ತಂತ್ರ ಚರ್ಚೆ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣಾ ಕಣ ರಂಗೇರುತ್ತಿದೆ. 3ನೇ ಬಾರಿ ದೆಹಲಿಯಲ್ಲಿ ಅಧಿಕಾರದ ಗದ್ದುಗೆ ಏರಲು ಕಾತರವಾಗಿರುವ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಮಾವೇಶವು ಇಂದು ಶನಿವಾರ ಮತ್ತು ನಾಳೆ ವಾರಾಂತ್ಯ ನಡೆಯಲಿದೆ.

ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತು: ಇಂದು ಬೆಳಗ್ಗೆ 10 ಗಂಟೆಗೆ ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಧ್ವಜಾರೋಹಣ ಮಾಡುವ ಮೂಲಕ ರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ. ಎರಡು ದಿನಗಳ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳ ಸಚಿವರು, ಅಧಿಕಾರಿಗಳು, ರಾಷ್ಟ್ರೀಯ ಪರಿಷತ್ತಿನ ಸದಸ್ಯರು, ಲೋಕಸಭೆ ಮತ್ತು ರಾಜ್ಯಸಭೆಯ ಹಾಲಿ ಮತ್ತು ಮಾಜಿ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ರಾಜ್ಯಾಧ್ಯಕ್ಷರು, ಲೋಕಸಭಾ ಕ್ಲಸ್ಟರ್‌ನ ಉಸ್ತುವಾರಿಗಳು ಮತ್ತು ಸಂಯೋಜಕರು, ಮೇಯರ್, ಪುರಸಭೆ ಮತ್ತು ನಗರ ಪಂಚಾಯತ್ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಜಿಲ್ಲಾಧ್ಯಕ್ಷರು, ಜಿಲ್ಲಾ ಉಸ್ತುವಾರಿಗಳು, ಮೋರ್ಚಾಗಳ ರಾಜ್ಯ ಅಧ್ಯಕ್ಷರು, ಮಾಧ್ಯಮ, ಸಾಮಾಜಿಕ ಮಾಧ್ಯಮ ಮತ್ತು ಐಟಿ ರಾಜ್ಯ ಸಂಚಾಲಕರು, ಆಯೋಗದ ಮಂಡಳಿ ನಿಗಮದ ಅಧ್ಯಕ್ಷರು, ಕೋಶಗಳ ಸಂಚಾಲಕರು ಮತ್ತು ಪಕ್ಷದ ಇತರ ಪ್ರಮುಖ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಲೋಕಸಭೆ ಚುನಾವಣೆ ಪ್ರಮುಖ ಅಜೆಂಡಾ: ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಬಿಜೆಪಿಯ ಈ ಸಮಾವೇಶ ಅತ್ಯಂತ ಮಹತ್ವದ್ದಾಗಿದೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಮತ್ತು ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುವುದು. ಅಲ್ಲದೇ ಮುಂದಿನ ಲೋಕಸಭೆ ಚುನಾವಣೆ ಬಗ್ಗೆಯೂ ಸಭೆಯಲ್ಲಿ ರಣತಂತ್ರ ರೂಪಿಸಲಾಗುವುದು.

ಕರ್ನಾಟಕದಿಂದ ಯಾರೆಲ್ಲಾ ಭಾಗವಹಿಸುತ್ತಿದ್ದಾರೆ?: ಬಿಜೆಪಿ ಕರ್ನಾಟಕ ಘಟಕದ ಹಿರಿಯ ನಾಯಕರು, ಶಾಸಕರು, ಮಾಜಿ ಶಾಸಕರು, ಬಿಜೆಪಿ ಆಡಳಿತದ ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಎಂಎಲ್​ಎ ಹಂತದ ನಾಯಕರಿಗೆ ರಾಜ್ಯದ 530 ನಾಯಕರಿಗೆ ಆಹ್ವಾನ ಸಿಕ್ಕಿದ್ದು, ಸುಮಾರು 400 ಮಂದಿ ನಾಯಕರು ಭಾಗಿಯಾಗುವ ನಿರೀಕ್ಷೆ ಇದೆ. ದೇಶದ ಎಲ್ಲಾ ಭಾಗಗಳಿಂದ ಸುಮಾರು 11, 500 ಮಂದಿ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT