ಘರ್ಷಣೆ ನಡೆದ ಸ್ಥಳದ ಚಿತ್ರ ANI
ದೇಶ

ಬಿಹಾರ: ವಿಗ್ರಹ ವಿಸರ್ಜನೆ ವೇಳೆ ಘರ್ಷಣೆ, ಕಲ್ಲು ತೂರಾಟ

ಸರಸ್ವತಿ ದೇವಿ ವಿಗ್ರಹ ವಿಸರ್ಜಿಸಲು ಹೊರಟಿದ್ದ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ ನಂತರ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿರುವ ಘಟನೆ ಭಾಗಲ್‌ಪುರದ ಲೋದಿಪುರದಲ್ಲಿ ಶುಕ್ರವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಹಾರ: ಸರಸ್ವತಿ ದೇವಿ ವಿಗ್ರಹ ವಿಸರ್ಜಿಸಲು ಹೊರಟಿದ್ದ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ ನಂತರ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿರುವ ಘಟನೆ ಭಾಗಲ್‌ಪುರದ ಲೋದಿಪುರದಲ್ಲಿ ಶುಕ್ರವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮಧ್ಯೆ ಪೊಲೀಸರು ಮತ್ತು ಸ್ಥಳೀಯ ಆಡಳಿತ ಪರಿಸ್ಥಿತಿಯನ್ನು ಹತೋಟಿಗೆ ತಂದಿದೆ.

"ಲೋದಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ವಿಗ್ರಹ ವಿಸರ್ಜನೆ ಸಮಯದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದೆ. ಪರಿಸ್ಥಿತಿಯನ್ನು ಕಾಪಾಡಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಭಾಗಲ್ಪುರ ಎಸ್ಪಿ ರಾಜ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಇದೇ ರೀತಿಯ ಮತ್ತೊಂದು ಘಟನೆಯಲ್ಲಿ ದರ್ಭಾಂಗಾದ ಬಹೇರಾ ಮಾರುಕಟ್ಟೆಯಲ್ಲಿ ಸರಸ್ವತಿ ದೇವಿಯ ವಿಗ್ರಹ ವಿಸರ್ಜಿಸುವ ಮಾರ್ಗದಲ್ಲಿ ಕಲ್ಲು ತೂರಾಟ ನಡೆಸಿದ ನಂತರ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದೆ. ಕೂಡಲೇ ದರ್ಭಾಂಗ ಜಿಲ್ಲಾ ಮ್ಯಾಜಿಸ್ಟ್ರೇಟ್, ಎಸ್‌ಎಸ್‌ಪಿ ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಕ್ರಮ ಆಸ್ತಿ ಗಳಿಕೆ ಕೇಸು: ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಬೆನ್ನಲ್ಲೇ IPS ಅಧಿಕಾರಿ ವರ್ಗ

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಹಾರ್ಮುಜ್ ಜಲಸಂಧಿ ಮುಕ್ತವಾಗಿರಬೇಕು, ಅಣು ಒಪ್ಪಂದಕ್ಕೆ ಯುರೇನಿಯಂ ಹಸ್ತಾಂತರ ಕಡ್ಡಾಯ: ಅಮೆರಿಕ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ ವ್ಯಾಪಾರದ ಗುರಿ; Video

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video