ಪ್ರಿಯಾಂಕಾ ಗಾಂಧಿ 
ದೇಶ

ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲು: ಭಾರತ್ ಜೋಡೋ ಯಾತ್ರೆಗೆ ಗೈರು! ಅಣ್ಣ-ತಂಗಿಯರ ನಡುವೆ ವೈಮನಸ್ಸು-ಬಿಜೆಪಿ

ಲಕ್ನೋ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಚಂದೌಲಿಯಲ್ಲಿನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಪ್ರಿಯಾಂಕಾ ಗಾಂಧಿ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಉತ್ತರ ಪ್ರದೇಶ ತಲುಪಿದೆ. ಆದರೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾದ ಪ್ರಿಯಾಂಕ ಗಾಂಧಿಯವರು ಈ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಇದನ್ನೇ ಅಸ್ತ್ರವಾಗಿ ಬಳಸಿಕೊಂಡಿರುವ ಯುಪಿ ಬಿಜೆಪಿ, ಇದು ಸಹೋದರ, ಸಹೋದರಿ ನಡುವಿನ ವೈಮನಸು ಸೂಚಿಸುತ್ತದೆ ಎಂದು ಆರೋಪಿಸಿದೆ.

ಭಾರತ್ ಜೋಡೋ ನ್ಯಾಯ್ ಯಾತ್ರೆ ಉತ್ತರ ಪ್ರದೇಶದ ಚಂದೌಲಿಗೆ ತಲುಪಿದ್ದು ಇದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆ ಯುಪಿ ಕಾಂಗ್ರೆಸ್​ ನಾಯಕರು ಮಾಡಿದ್ದಾರೆ. ಆದರೆ ಈ ಯಾತ್ರೆಯಲ್ಲಿ ಭಾಗಿಯಾಗಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಹೇಳಿದ್ದು ಅನಾರೋಗ್ಯದ ಕಾರಣ ನಾನು ಆಸ್ಪತ್ರೆಗೆ ದಾಖಲು ಆಗಿದ್ದೇನೆ. ಶೀಘ್ರದಲ್ಲೇ ಅನಾರೋಗ್ಯದಿಂದ ಚೇರಿಸಿಕೊಂಡು ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ. ಅಲ್ಲದೇ ಯಾತ್ರೆಗಾಗಿ ಎಲ್ಲ ಕಾರ್ಯಗಳನ್ನು ವ್ಯವಸ್ಥಿತವಾಗಿ ಮಾಡಿರುವ ಯುಪಿಯ ಕಾಂಗ್ರೆಸ್ ಮುಖಂಡರಿಗೆ, ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ​

ಯಾತ್ರೆಯಲ್ಲಿ ತಾನು ಭಾಗಿಯಾಗದ ಹಿನ್ನೆಲೆಯಲ್ಲಿ ಭಾರತ್ ನ್ಯಾಯ್ ಯಾತ್ರೆಯಲ್ಲಿ ಶ್ರಮಿಸಿದ ಎಲ್ಲಾ ನನ್ನ ಸಹೋದ್ಯೋಗಿಗಳು, ಯಾತ್ರಿಗಳು ಹಾಗೂ ನನ್ನ ಸಹೋದರನಿಗೆ ಶುಭಹಾರೈಸುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಆದರೆ ಇದನ್ನೇ ಅಸ್ತ್ರವಾಗಿಸಿಕೊಂಡಿರುವ ಬಿಜೆಪಿ, ಯಾವಾಗ ಯಾತ್ರೆ ಉತ್ತರ ಪ್ರದೇಶ ತಲುಪಿತೋ ಅವಾಗಲೇ ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದು ಕಾಂಗ್ರೆಸ್​ ನಾಯಕರ ಮಧ್ಯದ ಭಿನ್ನಾಭಿಪ್ರಾಯ, ಬಿರುಕು ಮೂಡಿದೆ ಎಂಬುದು ಹೇಳುತ್ತದೆ. ಸಹೋದರ-ಸಹೋದರಿ ಮಧ್ಯೆ ಕಿತ್ತಾಟವಿದೆ. ಕಾಂಗ್ರೆಸ್​ ಪಕ್ಷದಲ್ಲಿ ಎಲ್ಲವು ಸರಿಯಾಗಿಲ್ಲ ಎಂದು ಯುಪಿಯ ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ಆರೋಪ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಗಿಲು ಅಕ್ರಮ ನಿವಾಸಿಗಳ ಪೌರತ್ವ ಪರಿಶೀಲಿಸಿ, ಎನ್‌ಐಎ ತನಿಖೆಗೆ ವಹಿಸಿ: ಆರ್‌. ಅಶೋಕ ಆಗ್ರಹ

ಕೊಯಮತ್ತೂರು: ತಮಿಳು ಮಾತನಾಡದಿದ್ದಕ್ಕೆ ವಲಸೆ ಕಾರ್ಮಿಕನಿಗೆ ಚಾಕು ಇರಿತ; ಆರೋಪಿಗಳಿಗೆ ಹುಡುಕಾಟ

Osman Hadi ಕೊಲೆಗಾರ ಭಾರತದಲ್ಲಿದ್ದಾನೆ ಎಂದ ಬಾಂಗ್ಲಾದೇಶಕ್ಕೆ ತೀವ್ರ ಮುಖಭಂಗ; ದುಬೈನಲ್ಲಿ ಲೈವ್ ಬಂದು ಸ್ಪಷ್ಟನೆ..! ಹೇಳಿದ್ದೇನು?

ಮುಷ್ಕರದ ಬಿಸಿ, ಝೊಮ್ಯಾಟೊ, ಸ್ವಿಗ್ಗಿ ಸಿಬ್ಬಂದಿಗೆ ಹೆಚ್ಚಿನ ವೇತನ: ಹೊಸ ವರ್ಷದ ಮುನ್ನಾದಿನ ಗಿಗ್ ಕಾರ್ಮಿಕರಿಗೆ ಸಿಹಿಸುದ್ದಿ!

ಈಗ ನಮ್ಮೆದುರಿಗೆ ಬದಲಾಗುತ್ತಿರುವುದು ಕ್ರೈಸ್ತ ವರ್ಷವಾ? ಕ್ಯಾಲೆಂಡರ್ ಹೇಳ್ತಿರೋದು ಬೇರೆಯದೇ ಕತೆಯಾ? (ತೆರೆದ ಕಿಟಕಿ)

SCROLL FOR NEXT