ಸಿಎಂ ಮಮತಾ ಬ್ಯಾನರ್ಜಿ 
ದೇಶ

'ಕೇಂದ್ರ ಸರ್ಕಾರ ಬಂಗಾಳದಲ್ಲಿ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸುತ್ತಿದೆ': ಮಮತಾ ಬ್ಯಾನರ್ಜಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯದ ಜನರ ಆಧಾರ್ ಕಾರ್ಡ್ ಅನ್ನು ನಿಷ್ಕ್ರಿಯಗೊಳಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಕೋಲ್ಕತಾ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯದ ಜನರ ಆಧಾರ್ ಕಾರ್ಡ್ ಅನ್ನು ನಿಷ್ಕ್ರಿಯಗೊಳಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಬಿರ್ಭುಮ್ ಜಿಲ್ಲೆಯ ಸೂರಿಯಲ್ಲಿ ಸಾರ್ವಜನಿಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಮಮತಾ, 'ಆಧಾರ್ ಕಾರ್ಡ್ ಗಳ ನಿಷ್ಕ್ರಿಯತೆಯಿಂದಾಗಿ ತಮ್ಮ ಸರ್ಕಾರದ ವಿವಿಧ ಸಾಮಾಜಿಕ ಕಲ್ಯಾಣ ಯೋಜನೆಗಳ ಬ್ಯಾಂಕ್ ಖಾತೆಗಳು ಪ್ರಯೋಜನಗಳನ್ನು ತಮ್ಮ ಮೂಲಕ ಪಡೆಯುತ್ತಿಲ್ಲ. ಒಬ್ಬ ವ್ಯಕ್ತಿಗೆ ಆಧಾರ್ ಕಾರ್ಡ್ ಇಲ್ಲದಿದ್ದರೂ ಸಹ ತನ್ನ ಸರ್ಕಾರವು ವಿವಿಧ ರಾಜ್ಯ ಕಲ್ಯಾಣ ಯೋಜನೆಗಳ ಫಲಾನುಭವಿಗಳಿಗೆ ಪಾವತಿಸುವುದನ್ನು ಮುಂದುವರಿಸುತ್ತದೆ ಎಂದು ಹೇಳಿದರು.

ಅಂತೆಯೇ "ಎಚ್ಚರಿಕೆಯಿಂದಿರಿ, ಅವರು (ಬಿಜೆಪಿ ನೇತೃತ್ವದ ಕೇಂದ್ರ) ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸುತ್ತಿದ್ದಾರೆ. ಬಂಗಾಳದ ಹಲವು ಜಿಲ್ಲೆಗಳಲ್ಲಿ ಹಲವಾರು ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಅವರು (ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ) ಆಧಾರ್ ಕಾರ್ಡ್‌ಗಳನ್ನು ಡಿಲಿಂಕ್ ಮಾಡುತ್ತಿದ್ದಾರೆ. ಇದರಿಂದ ಜನರು ಚುನಾವಣೆಗೆ ಮುನ್ನ ಫಲಾನುಭವಿಗಳು ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ಪಡೆಯಲಾಗುವುದಿಲ್ಲ. ಆದರೆ ಆಧಾರ್ ಕಾರ್ಡ್ ಇಲ್ಲದಿದ್ದರೂ ನಾವು ಯೋಜನೆಗಳ ಫಲಾನುಭವಿಗಳಿಗೆ ಪಾವತಿಸುವುದನ್ನು ಮುಂದುವರಿಸುತ್ತೇವೆ. ಒಬ್ಬ ಫಲಾನುಭವಿಗೂ ತೊಂದರೆಯಾಗುವುದಿಲ್ಲ ಎಂದು ಅವರು ಹೇಳಿದರು.

ಹರ್ಯಾಣ, ಪಂಜಾಬ್‌ನಲ್ಲಿ ರೈತರು ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯ ಮೇಲೆ ಸರ್ಕಾರದ ಖಾತರಿಗೆ ಒತ್ತಾಯಿಸಿ ನಡೆಸುತ್ತಿರುವ ಆಂದೋಲನವನ್ನು ಉಲ್ಲೇಖಿಸಿದ ಬ್ಯಾನರ್ಜಿ, ಬಂಗಾಳದ ರೈತರು ಯಾವುದೇ ಸಮಸ್ಯೆ ಎದುರಿಸುತ್ತಿಲ್ಲ. "ರೈತರ ಪ್ರತಿಭಟನೆಗೆ ನಾನು ವಂದಿಸುತ್ತೇನೆ. ಅವರ ಮೇಲಿನ ದಾಳಿಯನ್ನು ನಾನು ಖಂಡಿಸುತ್ತೇನೆ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT