ಸಂಗ್ರಹ ಚಿತ್ರ 
ದೇಶ

ಶಂಭು ಗಡಿಯಲ್ಲಿ ತೀವ್ರಗೊಂಡ 'ದೆಹಲಿ ಚಲೋ' ಹೋರಾಟ: ಇಂದು ರೈತರು-ಸರ್ಕಾರದ ನಡುವೆ 4ನೇ ಸುತ್ತಿನ ಮಾತುಕತೆ

ಪಂಜಾಬ್​ ಮತ್ತು ಹರಿಯಾಣ ರೈತರು ನಡೆಸುತ್ತಿರುವ 'ದೆಹಲಿಚಲೋ' ಹೋರಾಟ ದಿನಕಳೆಯುತ್ತಿದ್ದಂತೆ ತೀವ್ರತೆ ಪಡೆದುಕೊಳ್ಳುತ್ತಿದೆ. ಶಂಭು ಗಡಿಯಲ್ಲಿ ನಿಹಾಂಗ್​ ಸಿಖ್ಖರು ಕತ್ತಿ ಝಳಪಿಸುತ್ತಿರುವ ಮತ್ತು ಖಲಿಸ್ತಾನಿ ಉಗ್ರ ಭಿಂದ್ರನ್​ ವಾಲೆ ಚಿತ್ರ ಹೋರಾಟದಲ್ಲಿ ಕಂಡುಬಂದಿದೆ.

ಹರಿಯಾಣ: ಪಂಜಾಬ್​ ಮತ್ತು ಹರಿಯಾಣ ರೈತರು ನಡೆಸುತ್ತಿರುವ 'ದೆಹಲಿಚಲೋ' ಹೋರಾಟ ದಿನಕಳೆಯುತ್ತಿದ್ದಂತೆ ತೀವ್ರತೆ ಪಡೆದುಕೊಳ್ಳುತ್ತಿದೆ. ಶಂಭು ಗಡಿಯಲ್ಲಿ ನಿಹಾಂಗ್​ ಸಿಖ್ಖರು ಕತ್ತಿ ಝಳಪಿಸುತ್ತಿರುವ ಮತ್ತು ಖಲಿಸ್ತಾನಿ ಉಗ್ರ ಭಿಂದ್ರನ್​ ವಾಲೆ ಚಿತ್ರ ಹೋರಾಟದಲ್ಲಿ ಕಂಡುಬಂದಿದೆ.

ಇದು 2021ರ ಹೋರಾಟದಲ್ಲಿ ನಡೆದ ಹಿಂಸಾಚಾರವನ್ನು ಮರುಕಳಿಸುವ ಸೂಚನೆ ನೀಡಿದೆ. ಇದರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿವೆ.

ಪಂಜಾಬ್​ ಮತ್ತು ಹರಿಯಾಣದ ಹಲವು ಗಡಿಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ರೈತರು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗುತ್ತಿದೆ. ಕೆಲವರು ಬಿಲ್ಲು ಬಾಣ ಹಿಡಿದು ತಿರುಗಾಡುತ್ತಿರುವುದು ಕಂಡು ಬಂದಿದೆ. ಇದರಿಂದ ಸಂಘರ್ಷ ವಾತಾವರಣ ಉಂಟಾಗಿದೆ.

ಒಂದೆಡೆ ರೈತ ನಾಯಕರು ಶಾಂತಿಯುತ ಹೋರಾಟ ನಡೆಸಲಾಗುತ್ತಿದೆ ಎಂದು ಹೇಳುತ್ತಿದ್ದರೆ, ಪ್ರತಿಭಟನಾಕಾರರು ತೀವ್ರತೆಯನ್ನು ಪ್ರದರ್ಶಿಸುತ್ತಿದ್ದಾರೆ.

ಈ ನಡುವೆ ರೈತ ಹೋರಾಟ ಆರಂಭವಾದ ದಿನದಿಂದ ಅಮಾನತಿನಲ್ಲಿರುವ ಮೊಬೈಲ್​ ಇಂಟರ್​ನೆಟ್​, ಸಂದೇಶ ರವಾನೆ ಸೇವೆಯನ್ನು ಫೆಬ್ರವರಿ 19ರ ವರೆಗೆ ನಿರ್ಬಂಧಿಸಿ ವಿಸ್ತರಿಸಲಾಗಿದೆ. ಈ ಹಿಂದೆ ಫೆಬ್ರವರಿ 13 ರಿಂದ ಫೆಬ್ರವರಿ 15 ರವರೆಗೆ ಮೊಬೈಲ್ ಇಂಟರ್​ನೆಟ್​ ನಿರ್ಬಂಧ ಹೇರಲಾಗಿತ್ತು.

ದೆಹಲಿಯ ಗಡಿ ಪ್ರದೇಶಗಳಲ್ಲಿ ರೈತರು ತೀವ್ರ ಸ್ವರೂಪದಲ್ಲಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಮುನ್ನೆಚ್ಚರಿಕಾ ಕ್ರಮ, ಯಾವುದೇ ಹಿಂಸಾಚಾರ ಮತ್ತು ಸುಳ್ಳು ಮಾಹಿತಿ ಹಬ್ಬದಂತೆ ತಡೆಯಲು ಅಂತರ್ಜಾಲ ಸೇವೆಯನ್ನು ಹರಿಯಾಣದ 7 ಜಿಲ್ಲೆಗಳಲ್ಲಿ ನಿರ್ಬಂಧ ವಿಧಿಸಲಾಗಿದೆ.

ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ಧ್ವನಿ ಕರೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಈ ನಡುವೆ ಪ್ರತಿಭಟನೆ ಹತ್ತಿಕ್ಕಲು ಸರ್ಕಾರದ ನಡೆಸುತ್ತಿರುವ ಯತ್ನಗಳು ಮುಂದುವರೆದಿದ್ದು, ಇಂದು ಸಂಜೆ 5 ಗಂಟೆಗೆ ರೈತ ಸಂಘಟನೆಗಳೊಂದಿಗೆ 4ನೇ ಸುತ್ತಿನ ಸಭೆ ನಿಗದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

Karnataka CM News LIVE Updates | ಸಿದ್ದರಾಮಯ್ಯ ರಾಜೀನಾಮೆ; ಸಿಎಲ್‌ಪಿ ಸಭೆ ಶನಿವಾರ; ಅಂದೇ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ!

Siddaramaiah Resign: ಇನ್ಮುಂದೆ ಗ್ಯಾರಂಟಿ ಯೋಜನೆಗಳು ಇರಲ್ಲ, 2028ರಲ್ಲಿ ಕಾಂಗ್ರೆಸ್ 40 ಸ್ಥಾನ ಕೂಡಾ ಗೆಲ್ಲಲ್ಲ- ಲಖನ್ ಜಾರಕಿಹೊಳಿ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

ನಿಮ್ಮ ಪ್ರೀತಿಗೆ ಧನ್ಯವಾದ: ರಾಜೀನಾಮೆ ನೀಡಿದ ಬಳಿಕ ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಭಾವುಕ ಪೋಸ್ಟ್!

SCROLL FOR NEXT