ಸಂಗ್ರಹ ಚಿತ್ರ 
ದೇಶ

ಶಂಭು ಗಡಿಯಲ್ಲಿ ತೀವ್ರಗೊಂಡ 'ದೆಹಲಿ ಚಲೋ' ಹೋರಾಟ: ಇಂದು ರೈತರು-ಸರ್ಕಾರದ ನಡುವೆ 4ನೇ ಸುತ್ತಿನ ಮಾತುಕತೆ

ಪಂಜಾಬ್​ ಮತ್ತು ಹರಿಯಾಣ ರೈತರು ನಡೆಸುತ್ತಿರುವ 'ದೆಹಲಿಚಲೋ' ಹೋರಾಟ ದಿನಕಳೆಯುತ್ತಿದ್ದಂತೆ ತೀವ್ರತೆ ಪಡೆದುಕೊಳ್ಳುತ್ತಿದೆ. ಶಂಭು ಗಡಿಯಲ್ಲಿ ನಿಹಾಂಗ್​ ಸಿಖ್ಖರು ಕತ್ತಿ ಝಳಪಿಸುತ್ತಿರುವ ಮತ್ತು ಖಲಿಸ್ತಾನಿ ಉಗ್ರ ಭಿಂದ್ರನ್​ ವಾಲೆ ಚಿತ್ರ ಹೋರಾಟದಲ್ಲಿ ಕಂಡುಬಂದಿದೆ.

ಹರಿಯಾಣ: ಪಂಜಾಬ್​ ಮತ್ತು ಹರಿಯಾಣ ರೈತರು ನಡೆಸುತ್ತಿರುವ 'ದೆಹಲಿಚಲೋ' ಹೋರಾಟ ದಿನಕಳೆಯುತ್ತಿದ್ದಂತೆ ತೀವ್ರತೆ ಪಡೆದುಕೊಳ್ಳುತ್ತಿದೆ. ಶಂಭು ಗಡಿಯಲ್ಲಿ ನಿಹಾಂಗ್​ ಸಿಖ್ಖರು ಕತ್ತಿ ಝಳಪಿಸುತ್ತಿರುವ ಮತ್ತು ಖಲಿಸ್ತಾನಿ ಉಗ್ರ ಭಿಂದ್ರನ್​ ವಾಲೆ ಚಿತ್ರ ಹೋರಾಟದಲ್ಲಿ ಕಂಡುಬಂದಿದೆ.

ಇದು 2021ರ ಹೋರಾಟದಲ್ಲಿ ನಡೆದ ಹಿಂಸಾಚಾರವನ್ನು ಮರುಕಳಿಸುವ ಸೂಚನೆ ನೀಡಿದೆ. ಇದರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿವೆ.

ಪಂಜಾಬ್​ ಮತ್ತು ಹರಿಯಾಣದ ಹಲವು ಗಡಿಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ರೈತರು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗುತ್ತಿದೆ. ಕೆಲವರು ಬಿಲ್ಲು ಬಾಣ ಹಿಡಿದು ತಿರುಗಾಡುತ್ತಿರುವುದು ಕಂಡು ಬಂದಿದೆ. ಇದರಿಂದ ಸಂಘರ್ಷ ವಾತಾವರಣ ಉಂಟಾಗಿದೆ.

ಒಂದೆಡೆ ರೈತ ನಾಯಕರು ಶಾಂತಿಯುತ ಹೋರಾಟ ನಡೆಸಲಾಗುತ್ತಿದೆ ಎಂದು ಹೇಳುತ್ತಿದ್ದರೆ, ಪ್ರತಿಭಟನಾಕಾರರು ತೀವ್ರತೆಯನ್ನು ಪ್ರದರ್ಶಿಸುತ್ತಿದ್ದಾರೆ.

ಈ ನಡುವೆ ರೈತ ಹೋರಾಟ ಆರಂಭವಾದ ದಿನದಿಂದ ಅಮಾನತಿನಲ್ಲಿರುವ ಮೊಬೈಲ್​ ಇಂಟರ್​ನೆಟ್​, ಸಂದೇಶ ರವಾನೆ ಸೇವೆಯನ್ನು ಫೆಬ್ರವರಿ 19ರ ವರೆಗೆ ನಿರ್ಬಂಧಿಸಿ ವಿಸ್ತರಿಸಲಾಗಿದೆ. ಈ ಹಿಂದೆ ಫೆಬ್ರವರಿ 13 ರಿಂದ ಫೆಬ್ರವರಿ 15 ರವರೆಗೆ ಮೊಬೈಲ್ ಇಂಟರ್​ನೆಟ್​ ನಿರ್ಬಂಧ ಹೇರಲಾಗಿತ್ತು.

ದೆಹಲಿಯ ಗಡಿ ಪ್ರದೇಶಗಳಲ್ಲಿ ರೈತರು ತೀವ್ರ ಸ್ವರೂಪದಲ್ಲಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಮುನ್ನೆಚ್ಚರಿಕಾ ಕ್ರಮ, ಯಾವುದೇ ಹಿಂಸಾಚಾರ ಮತ್ತು ಸುಳ್ಳು ಮಾಹಿತಿ ಹಬ್ಬದಂತೆ ತಡೆಯಲು ಅಂತರ್ಜಾಲ ಸೇವೆಯನ್ನು ಹರಿಯಾಣದ 7 ಜಿಲ್ಲೆಗಳಲ್ಲಿ ನಿರ್ಬಂಧ ವಿಧಿಸಲಾಗಿದೆ.

ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ಧ್ವನಿ ಕರೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಈ ನಡುವೆ ಪ್ರತಿಭಟನೆ ಹತ್ತಿಕ್ಕಲು ಸರ್ಕಾರದ ನಡೆಸುತ್ತಿರುವ ಯತ್ನಗಳು ಮುಂದುವರೆದಿದ್ದು, ಇಂದು ಸಂಜೆ 5 ಗಂಟೆಗೆ ರೈತ ಸಂಘಟನೆಗಳೊಂದಿಗೆ 4ನೇ ಸುತ್ತಿನ ಸಭೆ ನಿಗದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT