ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ 
ದೇಶ

ಬಿಜೆಪಿ ಮುಖ್ಯಸ್ಥ- ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಭೇಟಿ: ಮೈತ್ರಿ ಮುನ್ಸೂಚನೆ?

ಮುಂಬೈ ಭಾರತೀಯ ಜನತಾ ಪಕ್ಷದ ಮುಖ್ಯಸ್ಥ ಆಶೀಶ್ ಶೆಲಾರ್ ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದು, ಬಿಜೆಪಿ-ಎಂಎನ್ಎಸ್ ನಡುವೆ ಮೈತ್ರಿ ಏರ್ಪಡುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮುಂಬೈ: ಮುಂಬೈ ಭಾರತೀಯ ಜನತಾ ಪಕ್ಷದ ಮುಖ್ಯಸ್ಥ ಆಶೀಶ್ ಶೆಲಾರ್ ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದು, ಬಿಜೆಪಿ-ಎಂಎನ್ಎಸ್ ನಡುವೆ ಮೈತ್ರಿ ಏರ್ಪಡುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಭೇಟಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶೆಲಾರ್, ಹಳೆಯ ಸ್ನೇಹಿತರ ನಡುವೆ ಭೇಟಿಯಾಗುತ್ತಿರುತ್ತದೆ, ಸೂಕ್ತ ಸಮಯದಲ್ಲಿ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.

"ರಾಜ್ ಠಾಕ್ರೆ ಮತ್ತು ನಾನು ಬಹಳ ಹಿಂದಿನಿಂದಲೂ ಸ್ನೇಹಿತರಾಗಿದ್ದೇವೆ. ನಾವು ಇತರ ಕೆಲವು ವಿಷಯಗಳನ್ನು ಭೇಟಿಯಾಗಿ ಚರ್ಚಿಸುತ್ತೇವೆ. ನಾವು ಸರಿಯಾದ ಸಮಯದಲ್ಲಿ ಕೆಲವು ವಿವರಗಳನ್ನು ಬಹಿರಂಗಪಡಿಸುತ್ತೇವೆ" ಎಂದು ದಾದರ್‌ನಲ್ಲಿರುವ ಅವರ ನಿವಾಸದಲ್ಲಿ ಠಾಕ್ರೆ ಅವರನ್ನು ಭೇತಿ ಮಾಡಿದ ನಂತರ ಶೆಲಾರ್ ಸುದ್ದಿಗಾರರಿಗೆ ತಿಳಿಸಿದರು.

ನಗರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಗೆ ಕಡಿವಾಣ ಹಾಕುವ ಪ್ರಯತ್ನದಲ್ಲಿ ಮರಾಠಿ ಮತಗಳನ್ನು ವಿಭಜಿಸಲು ಬಿಜೆಪಿ ಎಂಎನ್‌ಎಸ್‌ನೊಂದಿಗೆ ಕೈಜೋಡಿಸಬಹುದು ಎಂಬ ಊಹಾಪೋಹಗಳು ಮಹಾರಾಷ್ಟ್ರದ ರಾಜಕೀಯ ವಲಯಗಳಲ್ಲಿ ಕೇಳಿಬರುತ್ತಿವೆ.

ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ನಾಯಕರ ನಿಯೋಗವು ಇತ್ತೀಚೆಗೆ ರಾಜ್ಯ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿತ್ತು. "ಎರಡೂ ಪಕ್ಷಗಳು (ಬಿಜೆಪಿ ಮತ್ತು ಎಂಎನ್‌ಎಸ್) ಸ್ನೇಹಪರವಾಗಿವೆ ಆದರೆ ಮೈತ್ರಿ ಕುರಿತು ಯಾವುದೇ ಚರ್ಚೆ ನಡೆದಿಲ್ಲ. (ರಾಜಕೀಯ) ಮುಂಬರುವ ದಿನಗಳಲ್ಲಿ ಮತ್ತು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಎಲ್ಲವೂ ಸ್ಪಷ್ಟವಾಗುತ್ತದೆ" ಎಂದು ಫಡ್ನವೀಸ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT