ಅನಿಲ್ ಮಸಿಹ್  
ದೇಶ

ಚಂಡೀಗಢ ಮೇಯರ್ ಚುನಾವಣೆ: ಎಂಟು 'ಅಸಿಂಧು' ಮತಗಳನ್ನೂ ಸೇರಿಸಿ ಮರು ಎಣಿಕೆಗೆ ಸುಪ್ರೀಂ ಕೋರ್ಟ್ ಆದೇಶ

ಚಂಡೀಗಢ ಮೇಯರ್ ಚುನಾವಣೆಯಲ್ಲಿ ಚಲಾವಣೆಯಲ್ಲಿ 'ಅಸಿಂಧು'ಗೊಳಿಸಲಾದ ಎಂಟು ಮತಗಳನ್ನೂ ಸೇರಿಸಿ ಮತಗಳ ಮರುಎಣಿಕೆ ಮಾಡಿ ಫಲಿತಾಂಶ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.

ನವದೆಹಲಿ: ವಿವಾದಾತ್ಮಕ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಚಲಾವಣೆಯಲ್ಲಿ 'ಅಸಿಂಧು'ಗೊಳಿಸಲಾದ ಎಂಟು ಮತಗಳನ್ನೂ ಸೇರಿಸಿ ಮತಗಳ ಮರುಎಣಿಕೆ ಮಾಡಿ ಫಲಿತಾಂಶ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.

ಚುನಾವಣಾ ಅಧಿಕಾರಿ ಅನಿಲ್ ಮಸಿಹ್ ಅವರು ಚುನಾವಣೆಯಲ್ಲಿ ಅವ್ಯವಹಾರ ಎಸಗಿದ್ದಾರೆ ಎಂದು ಆರೋಪಿಸಿ ಪರಾಜಿತ ಎಎಪಿ ಅಭ್ಯರ್ಥಿ ಕುಲದೀಪ್ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿನ ರಿಜಿಸ್ಟ್ರಾರ್ ಜನರಲ್ ನೇಮಿಸಿದ ನ್ಯಾಯಾಂಗ ಅಧಿಕಾರಿಯೊಬ್ಬರು ತನ್ನ ಮುಂದೆ ಹಾಜರುಪಡಿಸಿದ ಮತಪತ್ರಗಳನ್ನು ಮತ್ತು ಇಡೀ ಚುನಾವಣಾ ಪ್ರಕ್ರಿಯೆಯ ವಿಡಿಯೋವನ್ನು ಸರ್ವೋಚ್ಚ ನ್ಯಾಯಾಲಯವು ಪರಿಶೀಲಿಸುತ್ತಿದೆ.

"ಅಸಿಂಧುಗೊಂಡ ಮತಪತ್ರಗಳನ್ನು ನೋಡಲು ನಾವು ಬಯಸುತ್ತೇವೆ" ಎಂದು ಸಿಜೆಐ ಆರಂಭದಲ್ಲಿ ಹೇಳಿದರು. ಪ್ರಕರಣದ ವಿಚಾರಣೆ ಇನ್ನೂ ನಡೆಯುತ್ತಿದೆ.

ಸೋಮವಾರ ಸುಪ್ರೀಂ ಕೋರ್ಟ್‌ ನಲ್ಲಿ ವಿಚಾರಣೆಗೆ ಹಾಜರಾದ ಚುನಾವಣಾ ಅಧಿಕಾರಿ ಅನಿಲ್‌ ಮೆಸಿಹ್‌ ಅವರು ಮತಪತ್ರಗಳನ್ನು ತಿರುಚಿದ್ದನ್ನು ಒಪ್ಪಿಕೊಂಡಿದ್ದರು. ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರ ನೇತೃತ್ಬದ ಪೀಠ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿತ್ತಲ್ಲದೆ ಕುದುರೆ ವ್ಯಾಪಾರದ ವಿರುದ್ಧ ಕಳವಳ ವ್ಯಕ್ತಪಡಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT