ಕುಲದೀಪ್ ಕುಮಾರ್ 
ದೇಶ

ಎಎಪಿಯ ಕುಲದೀಪ್ ಕುಮಾರ್ ಚಂಡೀಗಢದ ಚುನಾಯಿತ ಮೇಯರ್: ಸುಪ್ರೀಂ ಕೋರ್ಟ್ ಘೋಷಣೆ

ಆಗಿ ಆಮ್ ಆದ್ಮಿ ಪಕ್ಷದ(ಎಎಪಿ) ಅಭ್ಯರ್ಥಿ ಕುಲದೀಪ್ ಕುಮಾರ್ ಅವರು ಚಂಡೀಗಢದ ಚುನಾಯಿತ ಮೇಯರ್ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಘೋಷಿಸಿದೆ.

ನವದೆಹಲಿ: ಆಗಿ ಆಮ್ ಆದ್ಮಿ ಪಕ್ಷದ(ಎಎಪಿ) ಅಭ್ಯರ್ಥಿ ಕುಲದೀಪ್ ಕುಮಾರ್ ಅವರು ಚಂಡೀಗಢದ ಚುನಾಯಿತ ಮೇಯರ್ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಘೋಷಿಸಿದೆ.

ಇದಕ್ಕು ಮುನ್ನ 8 ‘ಅಸಿಂಧು’ ಮತಗಳನ್ನು ಸೇರಿಸಿ ಮತಗಳ ಮರುಎಣಿಕೆ ಮಾಡುವಂತೆ ನಿರ್ದೇಶಿಸಿದ್ದ ಸುಪ್ರೀಂ ಕೋರ್ಟ್, ಈಗ ಮರು ಎಣಿಕೆಯ ನಂತರ ಫಲಿತಾಂಶ ಪ್ರಕಟಿಸಿದೆ.

ಈ ಹಿಂದೆ ಮತಪತ್ರಗಳನ್ನು ತಿರುಚಿ ಬಿಜೆಪಿ ಅಭ್ಯರ್ಥಿಯನ್ನು ಮೇಯರ್‌ ಎಂದು ಘೋಷಿಸಿದ್ದ ರಿಟರ್ನಿಂಗ್‌ ಅಧಿಕಾರಿ ಅನಿಲ್‌ ಮಸೀಹ್‌ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ನೇತೃತ್ವದ ಪೀಠ ಆದೇಶಿಸಿದೆ.

ಚುನಾವಣಾ ಅಧಿಕಾರಿ ಉದ್ದೇಶಪೂರ್ವಕವಾಗಿ ಮತಪತ್ರಗಳನ್ನು ತಿರುಚಿದ್ದಾರೆ. ಅವರ ದುಷ್ಕೃತ್ಯಕ್ಕಾಗಿ ಕಾನೂನು ಕ್ರಮ ಜರುಗಿಸಲು ಸುಪ್ರೀಂ ಕೋರ್ಟ್ ಸೂಚಿಸಿದೆ.

ಸೋಮವಾರ ಸುಪ್ರೀಂ ಕೋರ್ಟ್‌ ನಲ್ಲಿ ವಿಚಾರಣೆಗೆ ಹಾಜರಾದ ಚುನಾವಣಾ ಅಧಿಕಾರಿ ಅನಿಲ್‌ ಮೆಸಿಹ್‌ ಅವರು ಮತಪತ್ರಗಳನ್ನು ತಿರುಚಿದ್ದನ್ನು ಒಪ್ಪಿಕೊಂಡಿದ್ದರು. ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರ ನೇತೃತ್ಬದ ಪೀಠ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿತ್ತಲ್ಲದೆ ಕುದುರೆ ವ್ಯಾಪಾರದ ವಿರುದ್ಧ ಕಳವಳ ವ್ಯಕ್ತಪಡಿಸಿತ್ತು.

ಈ "ಕಷ್ಟದ ಸಮಯದಲ್ಲಿ" ಸುಪ್ರೀಂ ಕೋರ್ಟ್ ಪ್ರಜಾಪ್ರಭುತ್ವವನ್ನು ಉಳಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮಂಗಳವಾರ ಹೇಳಿದ್ದಾರೆ. ಚಂಡೀಗಢ ಮೇಯರ್ ಚುನಾವಣೆ ಪ್ರಕರಣದಲ್ಲಿ ನ್ಯಾಯಾಲಯದ ನಿರ್ಧಾರಕ್ಕೆ ಧನ್ಯವಾದ ಅರ್ಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT