ಪ್ರಧಾನಿ ನರೇಂದ್ರ ಮೋದಿ 
ದೇಶ

ರಾಮ ಮಂದಿರ ನಿರ್ಮಾಣದ ನಂತರವೂ ಕಾಂಗ್ರೆಸ್ ನಕಾರಾತ್ಮಕವಾಗಿದೆ, ದ್ವೇಷವನ್ನು ಬಿಡುತ್ತಿಲ್ಲ: ಪ್ರಧಾನಿ ಮೋದಿ

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಿದ್ದರೂ ಕಾಂಗ್ರೆಸ್ ಋಣಾತ್ಮಕವಾಗಿಯೇ ಚಿಂತಿಸುತ್ತಿದೆ ಮತ್ತು ದ್ವೇಷದ ಹಾದಿಯನ್ನು ಬಿಡಲು ಸಿದ್ಧವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಪ್ರತಿಪಕ್ಷವನ್ನು ಗುರಿಯಾಗಿಸಿ ಟೀಕಿಸಿದ್ದಾರೆ.

ಮೆಹ್ಸಾನಾ: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಿದ್ದರೂ ಕಾಂಗ್ರೆಸ್ ಋಣಾತ್ಮಕವಾಗಿಯೇ ಚಿಂತಿಸುತ್ತಿದೆ ಮತ್ತು ದ್ವೇಷದ ಹಾದಿಯನ್ನು ಬಿಡಲು ಸಿದ್ಧವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಪ್ರತಿಪಕ್ಷವನ್ನು ಗುರಿಯಾಗಿಸಿ ಟೀಕಿಸಿದ್ದಾರೆ.

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯಲ್ಲಿ ವಲಿನಾಥ ಮಹಾದೇವ್ ದೇವಾಲಯವನ್ನು ಉದ್ಘಾಟಿಸಿದ ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. 8,350 ರೂ. ಕೋಟಿಗೂ ಹೆಚ್ಚು ವೆಚ್ಚದ ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.

ಸ್ವತಂತ್ರ ಭಾರತದಲ್ಲಿ ದೀರ್ಘಕಾಲದವರೆಗೆ ಕಾಂಗ್ರೆಸ್ ಅಭಿವೃದ್ಧಿ ಮತ್ತು ಪರಂಪರೆಯ ನಡುವೆ ಸಂಘರ್ಷ ಮತ್ತು ದ್ವೇಷವನ್ನು ಸೃಷ್ಟಿಸಿದೆ. ಇದಕ್ಕೆ ಯಾರನ್ನಾದರೂ ದೂಷಿಸುವುದಾದರೆ, ಅದು ಕಾಂಗ್ರೆಸ್ ಆಗಿರುತ್ತದೆ. ಯಾಕೆಂದರೆ ದಶಕಗಳ ಕಾಲ ದೇಶವನ್ನು ಆಳಿದ್ದು ಇದೇ ಕಾಂಗ್ರೆಸ್. ಸೋಮನಾಥ (ದೇಗುಲ)ದಂತಹ ಪವಿತ್ರ ಸ್ಥಳವನ್ನೂ ವಿವಾದಕ್ಕೆ ಕಾರಣವನ್ನಾಗಿಸಿದವರು ಇದೇ ಜನರು ಎಂದರು

ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಪಾವಗಡ ದೇವಸ್ಥಾನದಲ್ಲಿ ಧಾರ್ಮಿಕ ಧ್ವಜಾರೋಹಣ ಮಾಡುವ ಇಚ್ಛೆಯನ್ನು ಕಾಂಗ್ರೆಸ್ ತೋರಿಸಲಿಲ್ಲ ಮತ್ತು ದಶಕಗಳಿಂದ ಮೊಧೇರಾದ ಸೂರ್ಯ ದೇವಾಲಯವನ್ನು ಮತ ಬ್ಯಾಂಕ್ ರಾಜಕೀಯಕ್ಕೆ ಬಳಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಇದೇ ಜನರು ಶ್ರೀರಾಮನ ಅಸ್ತಿತ್ವದ ಬಗ್ಗೆ ಪ್ರಶ್ನೆಗಳನ್ನು ಎತ್ತಿದರು ಮತ್ತು ಮಂದಿರ ನಿರ್ಮಾಣದ ವಿಚಾರದಲ್ಲಿ ಅಡೆತಡೆಗಳನ್ನು ಸೃಷ್ಟಿಸಿದರು. ಇಂದು ಭಗವಾನ್ ರಾಮನ ಜನ್ಮಸ್ಥಳದಲ್ಲಿ ಭವ್ಯವಾದ ದೇವಾಲಯವನ್ನು ನಿರ್ಮಿಸಲಾಗಿದ್ದು, ಇಡೀ ದೇಶವು ಸಂತೋಷ ಪಡುತ್ತಿದ್ದು, ನಕಾರಾತ್ಮಕ ಜನರು ದ್ವೇಷದ ಹಾದಿಯನ್ನು ಬಿಡುತ್ತಿಲ್ಲ ಎಂದು ಅವರು ಹೇಳಿದರು.

ದೀಸಾದಲ್ಲಿ (ಗುಜರಾತ್‌ನ ಬನಸ್ಕಾಂತ ಜಿಲ್ಲೆಯಲ್ಲಿ) ಏರ್ ಫೋರ್ಸ್ ಸ್ಟೇಷನ್ ರನ್‌ವೇ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ,ಇದು ಭಾರತದ ಭದ್ರತೆಯ ಪ್ರಮುಖ ಕೇಂದ್ರವಾಗಿ ಅಭಿವೃದ್ಧಿ ಹೊಂದಲಿದೆ. 'ಅಂದಿನ ಗುಜರಾತ್ ಮುಖ್ಯಮಂತ್ರಿಯಾಗಿ ನಾನು ಹಲವಾರು ಪತ್ರಗಳನ್ನು ಬರೆದಿದ್ದೇನೆ ಮತ್ತು ಇದಕ್ಕಾಗಿ ಸಾಕಷ್ಟು ಪ್ರಯತ್ನಿಸಿದೆ. ಆದರೆ ಕೇಂದ್ರದಲ್ಲಿ ಆಗಿನ ಕಾಂಗ್ರೆಸ್ ಸರ್ಕಾರವು ಅಡೆತಡೆಗಳನ್ನು ಸೃಷ್ಟಿಸಲು ಪ್ರಯತ್ನಿಸಿದೆ ಎಂದರು.

ವಾಯುಪಡೆಯ ಜನರು ಸಹ ಭಾರತದ ಭದ್ರತೆಯ ದೃಷ್ಟಿಯಿಂದ ಈ ಸ್ಥಳವು ಮುಖ್ಯವಾಗಿದೆ ಎಂದು ಹೇಳಿದರು. ಆದರೆ, ಅವರು ಕೇಳಲಿಲ್ಲ. 2004 ರಿಂದ 2014 ರವರೆಗೆ ಕಾಂಗ್ರೆಸ್ ಸರ್ಕಾರ ಕಡತದ ಮೇಲೆ ಕುಳಿತಿತ್ತು. ಸುಮಾರು ಒಂದೂವರೆ ವರ್ಷಗಳ ಹಿಂದೆ, ನಾನು ಯೋಜನೆಗೆ ಅಡಿಪಾಯ ಹಾಕಿದೆ. ಏಕೆಂದರೆ ಮೋದಿ ತಾವು ನಿರ್ಧರಿಸಿದ್ದನ್ನು ಮಾಡುತ್ತಾರೆ ಎಂದು ಪ್ರಧಾನಿ ಹೇಳಿದರು.

ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳುವ ಮೊದಲು ಪ್ರಧಾನಿ ವಲಿನಾಥ ಧಾಮ್ ದೇವಾಲಯದ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT