ರೈತ ಮುಖಂಡರು 
ದೇಶ

ರೈತನ ಸಾವು ಖಂಡಿಸಿ ಟ್ರ್ಯಾಕ್ಟರ್ ಮೆರವಣಿಗೆ: ಹರಿಯಾಣ ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲಿಸುವಂತೆ ಎಸ್‌ಕೆಎಂ ಆಗ್ರಹ

ಪಂಜಾಬ್-ಹರಿಯಾಣ ಗಡಿಯಲ್ಲಿ ಪ್ರತಿಭಟನಾನಿರತ ರೈತನ ಸಾವಿಗೆ ಸಂಬಂಧಿಸಿದಂತೆ ಹರಿಯಾಣ ಪೊಲೀಸರ ವಿರುದ್ಧ "ಕೊಲೆ" ಪ್ರಕರಣ ದಾಖಲಿಸುವಂತೆ ಸಂಯುಕ್ತ ಕಿಸಾನ್ ಮೋರ್ಚಾ ಗುರುವಾರ ಒತ್ತಾಯಿಸಿದೆ.

ನವದೆಹಲಿ: ಪಂಜಾಬ್-ಹರಿಯಾಣ ಗಡಿಯಲ್ಲಿ ಪ್ರತಿಭಟನಾನಿರತ ರೈತನ ಸಾವಿಗೆ ಸಂಬಂಧಿಸಿದಂತೆ ಹರಿಯಾಣ ಪೊಲೀಸರ ವಿರುದ್ಧ "ಕೊಲೆ" ಪ್ರಕರಣ ದಾಖಲಿಸುವಂತೆ ಸಂಯುಕ್ತ ಕಿಸಾನ್ ಮೋರ್ಚಾ ಗುರುವಾರ ಒತ್ತಾಯಿಸಿದೆ ಮತ್ತು ಮುಂದಿನ ವಾರ ಟ್ರ್ಯಾಕ್ಟರ್ ಗಳ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಘೋಷಿಸಿದೆ.

ಹರಿಯಾಣ ಪೊಲೀಸರು ಮತ್ತು ಪಂಜಾಬ್ ರೈತರ ನಡುವಿನ ಘರ್ಷಣೆಯಲ್ಲಿ 21 ವರ್ಷದ ರೈತ ಸುಭಕರನ್ ಸಿಂಗ್ ಅವರು ಬುಧವಾರ ಸಾವನ್ನಪ್ಪಿದ್ದು, ದೆಹಲಿ ಚಲೋ ಮೆರವಣಿಗೆಯನ್ನು ಎರಡು ದಿನ ಸ್ಥಗಿತಗೊಳಿಸಲಾಗಿದೆ.

ಈಗ ರದ್ದಾದ ಕೃಷಿ ಕಾನೂನುಗಳ ವಿರುದ್ಧ 2020–21ರಲ್ಲಿ ನಡೆದ ಉಗ್ರ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಸ್‌ಕೆಎಂ, ಯುವ ರೈತನ ಸಾವಿಗೆ ಸಂತಾಪ ಸೂಚಿಸಲು ಶುಕ್ರವಾರ ‘ಕರಾಳ ದಿನ’ ಆಚರಿಸುವುದಾಗಿ ಘೋಷಿಸಿದೆ.

ರೈತನ ಸಾವು ಖಂಡಿಸಿ ಫೆಬ್ರವರಿ 26 ರಂದು ರೈತರು ಹೆದ್ದಾರಿಗಳಲ್ಲಿ ಟ್ರ್ಯಾಕ್ಟರ್ ಗಳ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ ಮತ್ತು ಮಾರ್ಚ್ 14 ರಂದು ದೆಹಲಿಯಲ್ಲಿ ಮಹಾಪಂಚಾಯತ್ ನಡೆಸಲಿದ್ದಾರೆ ಎಂದು ಎಸ್ ಕೆಎಂ ಹೇಳಿದೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್‌ಕೆಎಂ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್, ಖಾನೌರಿ ಗಡಿಯಲ್ಲಿ ರೈತನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಪ್ರಕರಣ ದಾಖಲಿಸಬೇಕು ಮತ್ತು ಅವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದಲ್ಲದೆ, ಹರಿಯಾಣ ಪೊಲೀಸರು, ಪಂಜಾಬ್‌ಗೆ ಆಗಮಿಸಿ ಪ್ರತಿಭಟನಾ ನಿರತ ರೈತರ ಮೇಲೆ ಗುಂಡು ಹಾರಿಸಿದ್ದಾರೆ ಮತ್ತು ರೈತರ ಟ್ರ್ಯಾಕ್ಟರ್‌ಗಳಿಗೆ ಹಾನಿ ಮಾಡಿದ್ದಾರೆ ಎಂದು ರಾಜೇವಾಲ್ ಆರೋಪಿಸಿದ್ದಾರೆ.

"ಹರಿಯಾಣ ಪೊಲೀಸರು ಪಂಜಾಬ್‌ ಪ್ರವೇಶಿಸಿ, ನಮ್ಮ ಮೇಲೆ ಗುಂಡು ಹಾರಿಸಿದರು ಮತ್ತು ನಮ್ಮ ಟ್ರ್ಯಾಕ್ಟರ್‌ಗಳನ್ನು ಸಹ ಹಾನಿ ಮಾಡಿದ್ದಾರೆ. ಈ ಸಂಬಂಧ ಹರಿಯಾಣ ಸಿಎಂ ಮತ್ತು ಹರಿಯಾಣ ಗೃಹ ಸಚಿವರ ವಿರುದ್ಧ ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ರೈತನ ಸಾವಿನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ರಾಜೇವಾಲ್ ಒತ್ತಾಯಿಸಿದ್ದಾರೆ. ಅಲ್ಲದೆ ಈ ಸಂಬಂಧ ಮಾರ್ಚ್ 14 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ರೈತರ 'ಮಹಾಪಂಚಾಯತ್' ನಡೆಯಲಿದೆ" ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT