ಪ್ರಧಾನಿ ಮೋದಿ 
ದೇಶ

ಕಬ್ಬು ಖರೀದಿ ದರ ಏರಿಕೆ; ರೈತರ ಕಲ್ಯಾಣಕ್ಕಾಗಿ ವಾಗ್ದಾನ ಈಡೇರಿಸುವ ಸರ್ಕಾರದ ಬದ್ಧತೆ: ಪ್ರಧಾನಿ ಮೋದಿ

ಕಬ್ಬು ಖರೀದಿ ದರ ಏರಿಕೆಯು ರೈತರ ಕಲ್ಯಾಣಕ್ಕಾಗಿ ಸರ್ಕಾರ ಮಾಡಿದ್ದ ವಾಗ್ದಾನ ಈಡೇರಿಸುವ ಬದ್ಧತೆಯನ್ನು ತೋರಿಸುವ ಪ್ರಯತ್ನಗಳ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಪ್ರತಿಪಾದಿಸಿದ್ದಾರೆ.

ನವದೆಹಲಿ: ಕಬ್ಬು ಖರೀದಿ ದರ ಏರಿಕೆಯು ರೈತರ ಕಲ್ಯಾಣಕ್ಕಾಗಿ ಸರ್ಕಾರ ಮಾಡಿದ್ದ ವಾಗ್ದಾನ ಈಡೇರಿಸುವ ಬದ್ಧತೆಯನ್ನು ತೋರಿಸುವ ಪ್ರಯತ್ನಗಳ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಪ್ರತಿಪಾದಿಸಿದ್ದಾರೆ.

ಕೇಂದ್ರ ಸಚಿವ ಸಂಪುಟ ಕೈಗೊಂಡ ಹಲವಾರು ನಿರ್ಧಾರಗಳ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ, ಕಬ್ಬು ಖರೀದಿ ದರ ಏರಿಕೆಯಿಂದ ಕೋಟ್ಯಂತರ ಕಬ್ಬು ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಮೋದಿ ನೇತೃತ್ವದ ಸಚಿವ ಸಂಪುಟ ಸಭೆಯು ಅಕ್ಟೋಬರ್‌ನಿಂದ ಪ್ರಾರಂಭವಾಗುವ 2024-25 ರ ಹಂಗಾಮಿಗೆ ಕಬ್ಬು ಬೆಳೆಗಾರರಿಗೆ ಪ್ರತಿ ಕ್ವಿಂಟಾಲ್ ಗೆ ರೂ. 25 ರಿಂದ 340 ರೂ.ವರೆಗೆ ಕನಿಷ್ಠ ಬೆಲೆಯನ್ನು ಹೆಚ್ಚಿಸಿದೆ."ಹೊಸ ಎಫ್‌ಆರ್‌ಪಿಯು ಕಬ್ಬು ಬೆಳೆಯುವ ರೈತರ ಏಳಿಗೆಯನ್ನು ಖಚಿತಪಡಿಸುತ್ತದೆ. ಭಾರತವು ಈಗಾಗಲೇ ವಿಶ್ವದಲ್ಲಿಯೇ ಕಬ್ಬಿಗೆ ಅತ್ಯಧಿಕ ಬೆಲೆಯನ್ನು ಪಾವತಿಸುತ್ತಿದೆ ಎಂಬುದು ಗಮನಾರ್ಹವಾಗಿದೆ ಮತ್ತು ಅದರ ಹೊರತಾಗಿಯೂ ಸರ್ಕಾರವು ದೇಶೀಯ ಗ್ರಾಹಕರಿಗೆ ಅಗ್ಗದ ಸಕ್ಕರೆಯನ್ನು ಖಾತ್ರಿಪಡಿಸುತ್ತಿದೆ ಎಂದು ಸಭೆ ನಂತರ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕ್ಯಾಬಿನೆಟ್‌ನ ಇತರ ನಿರ್ಧಾರಗಳಿಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ರಾಷ್ಟ್ರೀಯ ಜಾನುವಾರು ಮಿಷನ್‌ಗೆ ಸಂಬಂಧ ಕೈಗೊಂಡ ಹೆಜ್ಜೆಯು ಮೇವು ಉತ್ಪಾದನೆ ಮತ್ತು ತಳಿ ಸಂರಕ್ಷಣೆಯಲ್ಲಿ ಪ್ರಮುಖ ಉತ್ತೇಜನದ ಜೊತೆಗೆ ಉದ್ಯಮಿಗಳಿಗೆ ಉತ್ತೇಜಕ ಅವಕಾಶಗಳನ್ನು ತರುತ್ತದೆ ಎಂದು ಹೇಳಿದ್ದಾರೆ.

ಉಪಗ್ರಹ ಘಟಕಗಳ ತಯಾರಿಕೆಗೆ ಶೇ. 100 ರಷ್ಟು ಸಾಗರೋತ್ತರ ಹೂಡಿಕೆ ಅನುಮತಿಸುವ ಮೂಲಕ ಬಾಹ್ಯಾಕಾಶ ವಲಯದಲ್ಲಿ ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಮಾನದಂಡಗಳನ್ನು ಸರ್ಕಾರ ಬುಧವಾರ ಸರಾಗಗೊಳಿಸಿದೆ. ಇದನ್ನು ಶ್ಲಾಘಿಸಿದ ಮೋದಿ, "ಬೆಳವಣಿಗೆ ಮತ್ತು ನಾವೀನ್ಯತೆಗಾಗಿ ಹೊಸ ಕಕ್ಷೆ ಗುರುತಿಸಿದ್ದು,ಬಾಹ್ಯಾಕಾಶ ಕ್ಷೇತ್ರದಲ್ಲಿ ಎಫ್‌ಡಿಐ ನೀತಿಯನ್ನು ಸರ್ಕಾರ ನವೀಕರಿಸಿದೆ, ಅವಕಾಶಗಳ ಗ್ಯಾಲಕ್ಸಿಗೆ ದಾರಿ ಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT