ಪ್ರಧಾನಿ ಮೋದಿ 
ದೇಶ

ಕಬ್ಬು ಖರೀದಿ ದರ ಏರಿಕೆ; ರೈತರ ಕಲ್ಯಾಣಕ್ಕಾಗಿ ವಾಗ್ದಾನ ಈಡೇರಿಸುವ ಸರ್ಕಾರದ ಬದ್ಧತೆ: ಪ್ರಧಾನಿ ಮೋದಿ

ಕಬ್ಬು ಖರೀದಿ ದರ ಏರಿಕೆಯು ರೈತರ ಕಲ್ಯಾಣಕ್ಕಾಗಿ ಸರ್ಕಾರ ಮಾಡಿದ್ದ ವಾಗ್ದಾನ ಈಡೇರಿಸುವ ಬದ್ಧತೆಯನ್ನು ತೋರಿಸುವ ಪ್ರಯತ್ನಗಳ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಪ್ರತಿಪಾದಿಸಿದ್ದಾರೆ.

ನವದೆಹಲಿ: ಕಬ್ಬು ಖರೀದಿ ದರ ಏರಿಕೆಯು ರೈತರ ಕಲ್ಯಾಣಕ್ಕಾಗಿ ಸರ್ಕಾರ ಮಾಡಿದ್ದ ವಾಗ್ದಾನ ಈಡೇರಿಸುವ ಬದ್ಧತೆಯನ್ನು ತೋರಿಸುವ ಪ್ರಯತ್ನಗಳ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಪ್ರತಿಪಾದಿಸಿದ್ದಾರೆ.

ಕೇಂದ್ರ ಸಚಿವ ಸಂಪುಟ ಕೈಗೊಂಡ ಹಲವಾರು ನಿರ್ಧಾರಗಳ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ, ಕಬ್ಬು ಖರೀದಿ ದರ ಏರಿಕೆಯಿಂದ ಕೋಟ್ಯಂತರ ಕಬ್ಬು ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಮೋದಿ ನೇತೃತ್ವದ ಸಚಿವ ಸಂಪುಟ ಸಭೆಯು ಅಕ್ಟೋಬರ್‌ನಿಂದ ಪ್ರಾರಂಭವಾಗುವ 2024-25 ರ ಹಂಗಾಮಿಗೆ ಕಬ್ಬು ಬೆಳೆಗಾರರಿಗೆ ಪ್ರತಿ ಕ್ವಿಂಟಾಲ್ ಗೆ ರೂ. 25 ರಿಂದ 340 ರೂ.ವರೆಗೆ ಕನಿಷ್ಠ ಬೆಲೆಯನ್ನು ಹೆಚ್ಚಿಸಿದೆ."ಹೊಸ ಎಫ್‌ಆರ್‌ಪಿಯು ಕಬ್ಬು ಬೆಳೆಯುವ ರೈತರ ಏಳಿಗೆಯನ್ನು ಖಚಿತಪಡಿಸುತ್ತದೆ. ಭಾರತವು ಈಗಾಗಲೇ ವಿಶ್ವದಲ್ಲಿಯೇ ಕಬ್ಬಿಗೆ ಅತ್ಯಧಿಕ ಬೆಲೆಯನ್ನು ಪಾವತಿಸುತ್ತಿದೆ ಎಂಬುದು ಗಮನಾರ್ಹವಾಗಿದೆ ಮತ್ತು ಅದರ ಹೊರತಾಗಿಯೂ ಸರ್ಕಾರವು ದೇಶೀಯ ಗ್ರಾಹಕರಿಗೆ ಅಗ್ಗದ ಸಕ್ಕರೆಯನ್ನು ಖಾತ್ರಿಪಡಿಸುತ್ತಿದೆ ಎಂದು ಸಭೆ ನಂತರ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕ್ಯಾಬಿನೆಟ್‌ನ ಇತರ ನಿರ್ಧಾರಗಳಿಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ರಾಷ್ಟ್ರೀಯ ಜಾನುವಾರು ಮಿಷನ್‌ಗೆ ಸಂಬಂಧ ಕೈಗೊಂಡ ಹೆಜ್ಜೆಯು ಮೇವು ಉತ್ಪಾದನೆ ಮತ್ತು ತಳಿ ಸಂರಕ್ಷಣೆಯಲ್ಲಿ ಪ್ರಮುಖ ಉತ್ತೇಜನದ ಜೊತೆಗೆ ಉದ್ಯಮಿಗಳಿಗೆ ಉತ್ತೇಜಕ ಅವಕಾಶಗಳನ್ನು ತರುತ್ತದೆ ಎಂದು ಹೇಳಿದ್ದಾರೆ.

ಉಪಗ್ರಹ ಘಟಕಗಳ ತಯಾರಿಕೆಗೆ ಶೇ. 100 ರಷ್ಟು ಸಾಗರೋತ್ತರ ಹೂಡಿಕೆ ಅನುಮತಿಸುವ ಮೂಲಕ ಬಾಹ್ಯಾಕಾಶ ವಲಯದಲ್ಲಿ ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಮಾನದಂಡಗಳನ್ನು ಸರ್ಕಾರ ಬುಧವಾರ ಸರಾಗಗೊಳಿಸಿದೆ. ಇದನ್ನು ಶ್ಲಾಘಿಸಿದ ಮೋದಿ, "ಬೆಳವಣಿಗೆ ಮತ್ತು ನಾವೀನ್ಯತೆಗಾಗಿ ಹೊಸ ಕಕ್ಷೆ ಗುರುತಿಸಿದ್ದು,ಬಾಹ್ಯಾಕಾಶ ಕ್ಷೇತ್ರದಲ್ಲಿ ಎಫ್‌ಡಿಐ ನೀತಿಯನ್ನು ಸರ್ಕಾರ ನವೀಕರಿಸಿದೆ, ಅವಕಾಶಗಳ ಗ್ಯಾಲಕ್ಸಿಗೆ ದಾರಿ ಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ