ಕಾಂಗ್ರೆಸ್ ಕಚೇರಿಯಲ್ಲಿ ಮಲಗಿದ ಶರ್ಮಿಳಾ ರೆಡ್ಡಿ 
ದೇಶ

ಗೃಹಬಂಧನ ಭೀತಿ: ಕಾಂಗ್ರೆಸ್‌ ಕಚೇರಿಯಲ್ಲಿಯೇ ಮಲಗಿದ ಶರ್ಮಿಳಾ ರೆಡ್ಡಿ; ಫೋಟೋ ವೈರಲ್

ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ವೈಎಸ್ ಶರ್ಮಿಳಾ ರೆಡ್ಡಿ ಮತ್ತು ವೈಎಸ್​​​ಆರ್​​​​​ಸಿಪಿ ನಾಯಕ ಮತ್ತು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನಡುವಿನ ರಾಜಕೀಯ ಸಂಘರ್ಷ ಹೆಚ್ಚುತ್ತಿದೆ.

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ವೈಎಸ್ ಶರ್ಮಿಳಾ ರೆಡ್ಡಿ ಮತ್ತು ವೈಎಸ್​​​ಆರ್​​​​​ಸಿಪಿ ನಾಯಕ ಮತ್ತು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನಡುವಿನ ರಾಜಕೀಯ ಸಂಘರ್ಷ ಹೆಚ್ಚುತ್ತಿದೆ. ಗುರುವಾರ ವಿಜಯವಾಡದಲ್ಲಿ ಚಲೋ ಸೆಕ್ರೆಟರಿಯೇಟ್ ಪ್ರತಿಭಟನೆಗೆ ಶರ್ಮಿಳಾ ಕರೆ ನೀಡಿದ್ದಾರೆ.

ಈ ಪ್ರತಿಭಟನೆಗೂ ಮುನ್ನ ವೈಎಸ್ ಶರ್ಮಿಳಾ ಗೃಹಬಂಧನ ತಪ್ಪಿಸಲು ಇಡೀ ರಾತ್ರಿ ಕಚೇರಿಯಲ್ಲೇ ಕಳೆದರು. ಇದೀಗ ಶರ್ಮಿಳಾ ನೆಲದ ಮೇಲೆ ಮಲಗಿರುವ ವಿಡಿಯೋವೊಂದು ಇದೀಗ ಹೊರಬಿದ್ದಿದೆ. ರಾಜ್ಯದಲ್ಲಿನ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಇಂದು ‘ಚಲೋ ಸೆಕ್ರೆಟರಿಯೇಟ್‌’ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು.

ಕಳೆದ ಐದು ವರ್ಷಗಳಲ್ಲಿ ಯುವಜನರು, ನಿರುದ್ಯೋಗಿಗಳು ಮತ್ತು ವಿದ್ಯಾರ್ಥಿಗಳ ಪ್ರಮುಖ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಂಪೂರ್ಣ ವಿಫಲರಾಗಿದ್ದಾರೆ. ಲಕ್ಷಗಟ್ಟಲೆ ನಿರುದ್ಯೋಗಿ ಯುವಕರಿಗೆ ದ್ರೋಹ ಬಗೆದಿರುವ ಸರ್ಕಾರದ ನೀತಿಯ ವಿರುದ್ಧ ಅಸಮ್ಮತಿ ವ್ಯಕ್ತಪಡಿಸುವ ಹಕ್ಕು ನಮಗಿಲ್ಲವೇ? ಸರ್ಕಾರದ ವಿರುದ್ಧ ಪ್ರಶ್ನಿಸುವ ನಮ್ಮನ್ನು ಸಮಾಜ ವಿರೋಧಿಗಳಂತೆ ಕಾಣಲಾಗುತ್ತಿದೆ’ ಎಂದು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಕಾಂಗ್ರೆಸ್ ನಾಯಕರನ್ನು ತಡೆಯಲಾಗುತ್ತಿದೆ. ಯಾವುದೇ ಕಾರಣಕ್ಕೂ ಪ್ರತಿಭಟನೆಯಿಂದ ಹಿಂದೆ ಸರಿಯುದಿಲ್ಲ ಎಂದಿರುವ ಶರ್ಮಿಳಾ, ಗೃಹ ಬಂಧನದಿಂದ ತಪ್ಪಿಸಿಕೊಳ್ಳಲು ಆಂಧ್ರ ರತ್ನ ಭವನಕ್ಕೆ ತೆರಳಿ ಇಡೀ ರಾತ್ರಿಯನ್ನು ಅಲ್ಲೇ ಕಳೆದಿದ್ದಾರೆ. ಶರ್ಮಿಳಾ ಅವರು ಹಾಸಿಗೆ ಹೊದ್ದು ಕಚೇರಿಯಲ್ಲಿ ಮಲಗಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿವೆ. ಆಂಧ್ರಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆ ಏಕಕಾಲದಲ್ಲಿ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT