ಕಾರು ಅಪಘಾತದಲ್ಲಿ ಶಾಸಕಿ ಲಾಸ್ಯ ನಂದಿತಾ ಸಾವು
ಕಾರು ಅಪಘಾತದಲ್ಲಿ ಶಾಸಕಿ ಲಾಸ್ಯ ನಂದಿತಾ ಸಾವು 
ದೇಶ

ತೆಲಂಗಾಣದಲ್ಲಿ ಭೀಕರ ಅಪಘಾತ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು; ಬಿಆರ್ ಎಸ್ ಶಾಸಕಿ ಲಾಸ್ಯ ನಂದಿತಾ ಸಾವು

Shilpa D

ಸಂಗಾರೆಡ್ಡಿ: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ತೆಲಂಗಾಣದ ಸಿಕಂದರಾಬಾದ್ ಕಂಟೋನ್ಮೆಂಟ್ ಕ್ಷೇತ್ರದ ಬಿಆರ್ ಎಸ್ ಶಾಸಕಿ ಜಿ.ಲಾಸ್ಯ ನಂದಿತಾ (33) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅವರು ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ ಮುಂಜಾನೆ ಪಟಾಂಚೇರು ಬಳಿಯ ಹೊರ ವರ್ತುಲ ರಸ್ತೆಯಲ್ಲಿ ರಸ್ತೆ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿದ್ದಾರೆ.

ರಸ್ತೆ ಅಪಘಾತದಲ್ಲಿ ಆಕೆಯ ಚಾಲಕ ಮತ್ತು ಪಿಎ ಗೆ ಗಂಭೀರ ಗಾಯಗಳಾಗಿವೆ. ಅವರ ಫೆಬ್ರವರಿ 13 ರಂದು ನಾರ್ಕೆಟ್ಪಲ್ಲಿಯಲ್ಲಿ ನಡೆದ ಮತ್ತೊಂದು ರಸ್ತೆ ಅಪಘಾತದಲ್ಲಿ ನಂದಿತಾ ಸಣ್ಣ ಗಾಯಗಳೊಂದಿಗೆ ಪಾರಾಗಿದ್ದರು.

ಕೇವಲ 10 ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ಅವರು ನಲ್ಗೊಂಡಕ್ಕೆ ತೆರಳುತ್ತಿದ್ದರು. ನಲ್ಗೊಂಡ ಜಿಲ್ಲೆಯ ನರ್ಕೆಟ್ಪಲ್ಲಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಹೋಮ್ ಗಾರ್ಡ್ ಜಿ ಕಿಶೋರ್ ಸಾವನ್ನಪ್ಪಿದ್ದಾರೆ.

ಐದು ಬಾರಿ ಶಾಸಕರಾಗಿದ್ದ ಜಿ.ಸಾಯಣ್ಣ ಅವರ ಪುತ್ರಿಯಾಗಿರುವ ನಂದಿತಾ, ಬಿಆರ್ ಎಸ್ ನಲ್ಲಿ ಸಿಕಂದರಾಬಾದ್ ಕಂಟೋನ್ಮೆಂಟ್ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ದುರಂತವೆಂದರೆ, ಆಕೆಯ ತಂದೆ ಫೆಬ್ರವರಿ 2023 ರಲ್ಲಿ ನಿಧನರಾದರು, ಸಾರ್ವಜನಿಕ ಸೇವೆ ಮತ್ತು ರಾಜಕೀಯ ಉಸ್ತುವಾರಿಯನ್ನು ಮಗಳಿಗಾಗಿ ಬಿಟ್ಟುಹೋದರು.

SCROLL FOR NEXT