ಪಿ.ವಿ ಸತ್ಯನಾಥ್
ಪಿ.ವಿ ಸತ್ಯನಾಥ್  
ದೇಶ

ಕೇರಳ: ದೇವಸ್ಥಾನದ ಆವರಣದಲ್ಲಿ ಸಿ‍ಪಿಐ(ಎಂ) ನಾಯಕನ ಕೊಚ್ಚಿ ಕೊಲೆ

Shilpa D

ಕೋಯಿಕ್ಕೋಡ್‌: ಕೊಯಿಲಾಂಡಿ ಸಮೀಪದ ದೇಗುಲದ ಆವರಣದಲ್ಲಿ ಸಿಪಿಐ (ಎಂ) ನಾಯಕರೊಬ್ಬರನ್ನು ನೆರೆ ಮನೆಯ ವ್ಯಕ್ತಿಯೇ ಇರಿದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಿ.ವಿ ಸತ್ಯನಾಥ್ (60) ಅವರ ಮೇಲೆ ಆಯುಧದಿಂದ ಹಲ್ಲೆ ಮಾಡಿದ್ದಾನೆ. ಗುರುವಾರ ರಾತ್ರಿ 10.30ರ ವೇಳೆಗೆ ಈ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ವೈಯಕ್ತಿಕ ಕಾರಣಗಳಿಂದ ಈ ಕೊಲೆ ನಡೆದಿದೆ ಎನ್ನಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 302 ಸೇರಿ ಹಲವು 'ಕಲಂ'ಗಳಡಿ ದೂರು ದಾಖಲಿಸಲಾಗಿದೆ. ಉತ್ಸವ ನಡೆಯುತ್ತಿದ್ದ ವೇಳೆ ದೇವಸ್ಥಾನದ ಒಳಗೇ ಸತ್ಯನಾಥ್‌ ಅವರಿಗೆ ಅಭಿಲಾಷ್ ಇರಿದಿದ್ದ. ಬಳಿಕ ಬಂದು ಪೊಲೀಸ್‌ ಠಾಣೆಗೆ ಶರಣಾಗಿದ್ದಾನೆ. ಆತನನ್ನು ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಏತನ್ಮಧ್ಯೆ ಕೊಯಿಲಾಂಡಿಯಲ್ಲಿ ಸಿಪಿಐ(ಎಂ) ಪ್ರತಿಭಟನೆಗೆ ಕರೆ ನೀಡಲಾಗಿದೆ.

SCROLL FOR NEXT