ಶಾಸಕ ಅಜಿತ್ ಮೈತಿ ಮೇಲೆ ಹಲ್ಲೆ 
ದೇಶ

ಪಶ್ಚಿಮ ಬಂಗಾಳ: ಸಂದೇಶಖಾಲಿ ಗ್ರಾಮಸ್ಥರಿಂದ ಟಿಎಂಸಿ ಶಾಸಕ ಅಜಿತ್ ಮೈತಿ ಮೇಲೆ ಹಲ್ಲೆ

ಪಶ್ಚಿಮ ಬಂಗಾಳದ ಹಿಂಸಾಚಾರ ಪೀಡಿತ ಸಂದೇಶಖಾಲಿಯಲ್ಲಿ ತೃಣಮೂಲ ಕಾಂಗ್ರೆಸ್ ನಾಯಕ ಅಜಿತ್ ಮೈತಿ ಅವರ ಮೇಲೆ ಶುಕ್ರವಾರ ಪ್ರತಿಭಟನಾಕಾರರು ಮಾಧ್ಯಮ ಸಿಬ್ಬಂದಿಯ ಸಮ್ಮುಖದಲ್ಲಿ ದೈಹಿಕ ಹಲ್ಲೆ.

ಕೋಲ್ಕತಾ: ಪಶ್ಚಿಮ ಬಂಗಾಳದ ಹಿಂಸಾಚಾರ ಪೀಡಿತ ಸಂದೇಶಖಾಲಿಯಲ್ಲಿ ತೃಣಮೂಲ ಕಾಂಗ್ರೆಸ್ ನಾಯಕ ಅಜಿತ್ ಮೈತಿ ಅವರ ಮೇಲೆ ಶುಕ್ರವಾರ ಪ್ರತಿಭಟನಾಕಾರರು ಮಾಧ್ಯಮ ಸಿಬ್ಬಂದಿಯ ಸಮ್ಮುಖದಲ್ಲಿ ದೈಹಿಕ ಹಲ್ಲೆ ನಡೆಸಿದರು.

ಮೈತಿ ಅವರು ಪಶ್ಚಿಮ ಮೇದಿನಿಪುರದ ಪಿಂಗ್ಲಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.

ಸಂದೇಶಖಾಲಿಯ ಬೆರ್ಮಜೂರ್ ಪ್ರದೇಶದಲ್ಲಿ ಪ್ರತಿಭಟನೆ ಮುಂದುವರೆದಿದ್ದು, ಗ್ರಾಮಸ್ಥರು ಇಂದು ಬೇಲಿಯನ್ನು ಭೇದಿಸಿ ಮೈತಿ ಅವರ ಮನೆಗೆ ನುಗ್ಗಿ ಚಪ್ಪಲಿಯಿಂದ ಥಳಿಸುತ್ತಿರುವ ದೃಶ್ಯಗಳು ಕಂಡುಬಂದಿವೆ. ಕೋಪಗೊಂಡ ಗ್ರಾಮಸ್ಥರು ಶುಕ್ರವಾರ ಪೊಲೀಸರೊಂದಿಗೆ ಘರ್ಷಣೆ ಸಹ ನಡೆಸಿದರು.

ಬೆರ್ಮಜೂರಿನ ಗ್ರಾಮಸ್ಥರು ಪೊಲೀಸ್ ವಾಹನಗಳನ್ನು ಆ ಪ್ರದೇಶದಲ್ಲಿ ಹಾದು ಹೋಗದಂತೆ ತಡೆಯಲು ಪ್ರಯತ್ನಿಸಿದರು.

"ನಾವು ಅವರನ್ನು ಆರಂಭದಲ್ಲಿ ತಡೆಯಲಿಲ್ಲ. ಆದರೆ ಯಾವುದೇ ಆರೋಪವಿಲ್ಲದೆ ನಮ್ಮ ಹುಡುಗರನ್ನು ಏಕೆ ಬಂಧಿಸುತ್ತಿದ್ದಾರೆ ಎಂಬುದರ ಕುರಿತು ನಾವು ಅವರೊಂದಿಗೆ ಮಾತನಾಡಲು ಬಯಸಿದ್ದೆವು. ನಮ್ಮ ಮನವಿಗೆ ಸ್ಪಂದಿಸಲಿಲ್ಲ. ಪೊಲೀಸ್ ವಾಹನವು ಮಹಿಳೆಯ ಕಾಲುಗಳ ಮೇಲೆ ಹಾದುಹೋಯಿತು. ನಾವು ಅವರೊಂದಿಗೆ ಮಾತನಾಡಲು ಬಯಸುತ್ತೇವೆ" ಎಂದು ಮಹಿಳೆಯೊಬ್ಬರು ಹೇಳಿದರು ಎಂದು ಪ್ರತಿಭಟನಾಕಾರರು ಎಎನ್‌ಐಗೆ ತಿಳಿಸಿದ್ದಾರೆ.

"ಈ ದೇಶದಲ್ಲಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆ ಇದೆಯೇ? ಪೊಲೀಸರು ಬಾಲಕಿಯ ಮೇಲೆ ವಾಹನ ಓಡಿಸಲು ಯತ್ನಿಸಿದರು" ಎಂದು ಮತ್ತೊಬ್ಬ ಪ್ರತಿಭಟನಾಕಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ಶೇಖ್ ಷಹಜಹಾನ್, ಸಿರಾಜುದ್ದೀನ್ ಅವರು ನಮ್ಮ ಎಲ್ಲಾ ಜಮೀನುಗಳನ್ನು ವಶಪಡಿಸಿಕೊಂಡಿದ್ದಾರೆ. ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಪೊಲೀಸರು ಪ್ರತಿಭಟನಾಕಾರರನ್ನು ಬಲವಂತವಾಗಿ ಓಡಿಸಿದರು. ಈ ಪ್ರಕ್ರಿಯೆಯಲ್ಲಿ ಪ್ರತಿಭಟನಾಕಾರರಲ್ಲಿ ಒಬ್ಬರು ಕಾಲು ಮುರಿದುಕೊಂಡರು" ಎಂದು ಇನ್ನೊಬ್ಬ ಪ್ರತಿಭಟನಾಕಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT