ಸೀಟು ಹಂಚಿಕೆ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಎಪಿ ಮತ್ತು ಕಾಂಗ್ರೆಸ್ ನಾಯಕರು 
ದೇಶ

Lok Sabha Elections: ದೆಹಲಿ, ಗುಜರಾತ್, ಗೋವಾ, ಹರಿಯಾಣದಲ್ಲಿ ಲೋಕಸಭೆ ಸೀಟು ಹಂಚಿಕೆ ಘೋಷಿಸಿದ ಎಎಪಿ-ಕಾಂಗ್ರೆಸ್

ಮುಂಬರುವ ಲೋಕಸಭೆ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಪಾಲುದಾರರಾಗಿರುವ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷ (ಎಎಪಿ) ಸೀಟು ಹಂಚಿಕೆ ಕುರಿತು ಘೋಷಿಸಿದ್ದು, ದೆಹಲಿಯಲ್ಲಿ ಎಎಪಿ 4 ಮತ್ತು ಕಾಂಗ್ರೆಸ್ 3 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಉಭಯ ಪಕ್ಷಗಳು ಶನಿವಾರ ತಿಳಿಸಿವೆ.

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಪಾಲುದಾರರಾಗಿರುವ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷ (ಎಎಪಿ) ಸೀಟು ಹಂಚಿಕೆ ಕುರಿತು ಘೋಷಿಸಿದ್ದು, ದೆಹಲಿಯಲ್ಲಿ ಎಎಪಿ 4 ಮತ್ತು ಕಾಂಗ್ರೆಸ್ 3 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಉಭಯ ಪಕ್ಷಗಳು ಶನಿವಾರ ತಿಳಿಸಿವೆ.

ದೆಹಲಿಯಲ್ಲಿ ಏಳು ಲೋಕಸಭಾ ಕ್ಷೇತ್ರಗಳಿದ್ದು, 2019ರ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದೆ.

ಇಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ಮುಕುಲ್ ವಾಸ್ನಿಕ್, ಎಎಪಿ ನವದೆಹಲಿ, ಪಶ್ಚಿಮ ದೆಹಲಿ, ದಕ್ಷಿಣ ದೆಹಲಿ ಮತ್ತು ಪೂರ್ವ ದೆಹಲಿ ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದರೆ, ತಮ್ಮ ಪಕ್ಷ ಚಾಂದಿನಿ ಚೌಕ್, ಈಶಾನ್ಯ ದೆಹಲಿ ಮತ್ತು ವಾಯುವ್ಯ ದೆಹಲಿ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಘೋಷಿಸಿದರು.

ಚಂಡೀಗಢದ ಏಕೈಕ ಲೋಕಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನೇ ಕಣಕ್ಕಿಳಿಸಲಿದೆ ಎಂದು ವಾಸ್ನಿಕ್ ಹೇಳಿದ್ದಾರೆ.

'ಗುಜರಾತ್‌ನಲ್ಲಿ ಎಎಪಿಯು ಭರೂಚ್ ಮತ್ತು ಭಾವನಗರದಿಂದ ಸ್ಪರ್ಧಿಸಲಿದ್ದು, ರಾಜ್ಯದಲ್ಲಿ ಉಳಿದ 24 ಸ್ಥಾನಗಳಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಹರಿಯಾಣದ 10 ಕ್ಷೇತ್ರಗಳ ಪೈಕಿ ಎಎಪಿ ಕುರುಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಲಿದ್ದರೆ, ಉಳಿದೆಡೆ ಕಾಂಗ್ರೆಸ್ ಸ್ಪರ್ಧಿಸಲಿದೆ. ಗೋವಾದಲ್ಲಿ ಕಾಂಗ್ರೆಸ್ ಎರಡೂ ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ' ಎಂದು ಅವರು ಹೇಳಿದರು.

ಪಂಜಾಬ್‌ನಲ್ಲಿ ಪ್ರತ್ಯೇಕವಾಗಿ ಸ್ಪರ್ಧೆ

ಲೋಕಸಭೆ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ ಆಪ್ ಮತ್ತು ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧಿಸಲು ನಿರ್ಧರಿಸಿವೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸಂದೀಪ್ ಪಾಠಕ್ ಹೇಳಿದ್ದಾರೆ.

ಎರಡು ಪಕ್ಷಗಳು ವಿಭಿನ್ನ ಚುನಾವಣಾ ಚಿಹ್ನೆಗಳ ಮೇಲೆ ಹೋರಾಡುತ್ತಿದ್ದರೂ, ದೆಹಲಿಯ ಎಲ್ಲಾ ಏಳು ಸ್ಥಾನಗಳಲ್ಲಿ ಗೆಲುವು ಸಾಧಿಸಲು ಒಟ್ಟಾಗಿ ಕೆಲಸ ಮಾಡುತ್ತವೆ ಎಂದು ವಾಸ್ನಿಕ್ ಹೇಳಿದರು.

ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷಗಳು ರೂಪಿಸಿರುವ ಇಂಡಿಯಾ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಮತ್ತು ಎಎಪಿ ಪಕ್ಷಗಳಿವೆ.

ಎಎಪಿ ಈಗಾಗಲೇ ಗುಜರಾತ್‌ನ ಭರೂಚ್ ಮತ್ತು ಭಾವನಗರ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

'ಇಂದು ದೇಶಕ್ಕೆ ಬಲಿಷ್ಠ ಪರ್ಯಾಯದ ಅಗತ್ಯವಿದೆ. ದೇಶದ ಹಿತದೃಷ್ಟಿಯಿಂದ ಈ ಮೈತ್ರಿಯನ್ನು ರಚಿಸಲಾಗಿದೆ. ಈ ಚುನಾವಣೆಯನ್ನು ಇಂಡಿಯಾ ಮೈತ್ರಿಕೂಟದಿಂದಲೇ ಎದುರಿಸಲಾಗುವುದು. ಮೈತ್ರಿಯಿಂದಾಗಿ ಬಿಜೆಪಿಯ ಲೆಕ್ಕಾಚಾರಗಳು ತಪ್ಪಾಗುತ್ತವೆ' ಎಂದು ಪಾಠಕ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

SCROLL FOR NEXT