Uttarakhand: 6 more people held in connection with Haldwani violence 
ದೇಶ

ಹಲ್ದ್ವಾನಿ ಹಿಂಸಾಚಾರದ ಮಾಸ್ಟರ್ ಮೈಂಡ್ ದೆಹಲಿಯಲ್ಲಿ ಬಂಧನ

ಹಲ್ದ್ವಾನಿ ಹಿಂಸಾಚಾರ ಪ್ರಕರಣದ ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್ ನನ್ನು ಶನಿವಾರ ದೆಹಲಿಯಲ್ಲಿ ಬಂಧಿಸಲಾಗಿದೆ.

ನವದೆಹಲಿ: ಹಲ್ದ್ವಾನಿ ಹಿಂಸಾಚಾರ ಪ್ರಕರಣದ ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್ ನನ್ನು ಶನಿವಾರ ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ನೈನಿತಾಲ್ ಎಸ್ ಎಸ್ ಪಿ ಪ್ರಹ್ಲಾದ್ ನಾರಾಯಣ ಅವರು ಮೀನಾ ತಿಳಿಸಿದ್ದಾರೆ.

ಗುಜರಾತ್, ದೆಹಲಿ, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಲಿಕ್ ಹಾಗೂ ಅವರ ಮಗ ಅಬ್ದುಲ್ ಮೊಯ್ದ್ ಬಂಧನಕ್ಕೆ ಆರು ತಂಡಗಳನ್ನು ರಚಿಸಲಾಗಿತ್ತು ಎಂದು ಎಸ್ಎಸ್ ಪಿ ಹೇಳಿದ್ದಾರೆ.

ಈ ಆರು ತಂಡಗಳಲ್ಲಿ ಒಂದು ತಂಡ ದೆಹಲಿಯಿಂದ ಮಲಿಕ್ ನನ್ನು ಬಂಧಿಸಿದೆ. ಆದರೆ ಅವರ ಮಗ ಇನ್ನೂ ಪರಾರಿಯಾಗಿದ್ದಾನೆ ಎಂದು ಮೀನಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮಲಿಕ್, ಹಲ್ದ್ವಾನಿಯ ಬನ್‌ಭೂಲ್‌ಪುರ ಪ್ರದೇಶದಲ್ಲಿ "ಕಾನೂನುಬಾಹಿರವಾಗಿ" ಮದರಸಾವನ್ನು ನಿರ್ಮಿಸಿದ್ದು, ಸ್ಥಳೀಯ ಆಡಳಿತ ಅದನ್ನು ಫೆಬ್ರವರಿ 8 ರಂದು ತೆರವುಗೊಳಿಸಲು ಮುಂದಾದಾಗ ಘರ್ಷಣೆ ನಡೆದಿತ್ತು. ಈ ಹಿಂಸಾಚಾರದಲ್ಲಿ 6 ಮಂದಿ ಸಾವನ್ನಪ್ಪಿದ್ದು, ಪೊಲೀಸರು ಮತ್ತು ಪತ್ರಕರ್ತರು ಸೇರಿದಂತೆ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಡಿಗೆ ಬೆಂಕಿ ಹಚ್ಚಿ, ಶಿಬಿರಗಳನ್ನೇ ಸ್ಫೋಟಿಸಿದ ಕಳ್ಳಬೇಟೆಗಾರರು: ಚಾಮರಾಜನಗರ ಎನ್‌ಕೌಂಟರ್ ಪ್ರತಿಕಾರಕ್ಕೆ 10 ಎಕರೆ ಅರಣ್ಯವೇ ಬಲಿ!

ದಾವಣಗೆರೆ: ಇಬ್ಬರು ಮಕ್ಕಳ ಸಹಿತ ದಂಪತಿ ಅನುಮಾನಾಸ್ಪದವಾಗಿ ನಾಪತ್ತೆ; ಮನೆಯಲ್ಲಿ ಪತ್ರ ಪತ್ತೆ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: ಶಿಕ್ಷೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ Tehelka ಮಾಜಿ ಸಂಪಾದಕ ತರುಣ್ ತೇಜಪಾಲ್

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ: ಕಾಂಗ್ರೆಸ್ ನಾಯಕರ ಮೌನಕ್ಕೆ ಮಲ್ಲಿಕಾರ್ಜುನ ಖರ್ಗೆ ಬೇಸರ, ‘ನನಗೆ ನೋವಾಗಿದೆ’ ಎಂದ ಅಧ್ಯಕ್ಷ..!

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಕೊಟ್ಟಿದ್ದ ವ್ಯಕ್ತಿಯ ಬಂಧನ