ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ TNIE
ದೇಶ

ಮೋದಿ ಸರ್ಕಾರದ ತಪ್ಪು ನಿರ್ವಹಣೆಯ ಪರಿಣಾಮ ಆರ್ಥಿಕತೆ 20 ವರ್ಷ ಹಿಂದಕ್ಕೆ: ಕಾಂಗ್ರೆಸ್

ಮೋದಿ ಸರ್ಕಾರದ ತಪ್ಪು ನಿರ್ವಹಣೆಯಿಂದಾಗಿ ಆರ್ಥಿಕತೆ 20 ವರ್ಷ ಹಿಂದಕ್ಕೆ ಹೋಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ನವದೆಹಲಿ: ಮೋದಿ ಸರ್ಕಾರದ ತಪ್ಪು ನಿರ್ವಹಣೆಯಿಂದಾಗಿ ಆರ್ಥಿಕತೆ 20 ವರ್ಷ ಹಿಂದಕ್ಕೆ ಹೋಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆರ್ಥಿಕ ಬೆಳವಣಿಗೆ ಅಂದರೆ ಕೃಷಿಯಿಂದ ಉದ್ಯಮ, ಸೇವೆಗಳಿಗೆ ಉದ್ಯೋಗದ ವೈವಿಧ್ಯೀಕರಣ ಎಂದು ಕಾಂಗ್ರೆಸ್ ಹೇಳಿದ್ದು, ಈ ನಿಟ್ಟಿನಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಸಾಧಿಸಿದ ಪ್ರಗತಿಯನ್ನು ನರೇಂದ್ರ ಮೋದಿ ಸರ್ಕಾರ ಹಿಂದಕ್ಕೆ ಕೊಂಡೊಯ್ದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, 2004-05 ಹಾಗೂ 2017-18 ನಡುವೆ ಕೃಷಿ ಸಂಬಂಧಿತ ನೌಕರರು 6.7 ಕೋಟಿಯಷ್ಟು ಕಡಿಮೆಯಾಗಿದ್ದಾರೆ, ಕಡಿಮೆ ದೈನಂದಿನ ವೇತನ ಪಡೆಯುವ ಬದಲಿಗೆ, ಹೆಚ್ಚು ವೇತನ ನೀಡುವ ಉತ್ಪಾದನೆ ಮತ್ತು ಸೇವಾ ಕ್ಷೇತ್ರಗಳ ಉದ್ಯೋಗಗಳಿಗೆ ಸೇರಿದ್ದರು ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಇದು ಐತಿಹಾಸಿಕ ಸಾಧನೆಯಾಗಿ, ಭಾರತ ಸಾಧಿಸಿದ ಮಧ್ಯಮ ಆದಾಯ ದೇಶಗಳ ಮೈಲಿಗಲ್ಲಾಗಿತ್ತು ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. ಈ ಪ್ರಗತಿಯನ್ನು ಡಾ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಸಾಧಿಸಲಾಗಿತ್ತು. ಇದನ್ನು ಮೋದಿ ಸರ್ಕಾರ 3 ವರ್ಷಗಳ ಅನ್ಯಾಯ ಕಾಲದಲ್ಲಿ ಬುಡಮೇಲು ಮಾಡಿತ್ತು ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ.

2018-19 ರಿಂದ ಕೃಷಿಕ ನೌಕರರ ಸಂಖ್ಯೆ 6 ಕೋಟಿಗಳಿಗೆ ಏರಿಕೆಯಾಗಿದ್ದು, ಇದು ಕೋವಿಡ್ ಪೂರ್ವದಲ್ಲಿದ್ದ ಸಂಖ್ಯೆಗೆ ಮರಳಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. ಭಾರತವನ್ನು ಸಮೃದ್ಧಿಯ ಪಥದಲ್ಲಿ ನಡೆಸುವುದಕ್ಕಿಂತ ಪ್ರಧಾನಿ ಅವರ ಅನಾಹುತಕಾರಿ ನಿರ್ವಹಣೆ ನಮ್ಮ ದೇಶದ ಆರ್ಥಿಕ ರೂಪಾಂತರವನ್ನು 20 ವರ್ಷಗಳ ಹಿಂದಕ್ಕೆ ಕೊಂಡೊಯ್ದಿದ್ದಾರೆ ಎಂದು ರಮೇಶ್ ಆರೋಪಿಸಿದ್ದಾರೆ.

ಕಾಂಗ್ರೆಸ್ ಆರ್ಥಿಕತೆಯನ್ನು ನಿಭಾಯಿಸುವ ವಿಷಯವಾಗಿ ಸರ್ಕಾರದ ಮೇಲೆ ದಾಳಿ ಮಾಡುತ್ತಿದೆ ಮತ್ತು "ಹೆಚ್ಚುತ್ತಿರುವ" ನಿರುದ್ಯೋಗ ಮತ್ತು ಬೆಲೆ ಏರಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT