ಸಂಗ್ರಹ ಚಿತ್ರ 
ದೇಶ

ಲವ್ ಜಿಹಾದ್, ನಿಷೇಧಿತ ಸಂಘಟನೆಯೊಂದಿಗೆ ನಂಟು: ಇಬ್ಬರು ಶಿಕ್ಷಕರು ಅಮಾನತು!

ನಿಷೇಧಿತ ಸಂಘಟನೆಗಳೊಂದಿಗೆ ನಂಟು ಹೊಂದಿ, ಧಾರ್ಮಿಕ ಮತಾಂತರ, ಲವ್ ಜಿಹಾದ್ ನಲ್ಲಿ ತೊಡಗಿದ್ದ ಆರೋಪದಲ್ಲಿ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ವರದಿಯಾಗಿದೆ.

ಕೋಟಾ: ನಿಷೇಧಿತ ಸಂಘಟನೆಗಳೊಂದಿಗೆ ನಂಟು ಹೊಂದಿ, ಧಾರ್ಮಿಕ ಮತಾಂತರ, ಲವ್ ಜಿಹಾದ್ ನಲ್ಲಿ ತೊಡಗಿದ್ದ ಆರೋಪದಲ್ಲಿ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ವರದಿಯಾಗಿದೆ. ಈ ಆರೋಪದ ಸಂಬಂಧ ಮತ್ತೋರ್ವ ಶಿಕ್ಷಕರೂ ತನಿಖೆಯನ್ನು ಎದುರಿಸುತ್ತಿದ್ದಾರೆ ಎಂದು ರಾಜಸ್ಥಾನ ಶಿಕ್ಷಣ ಸಚಿವ ಮದನ್ ದಿಲಾವರ್ ತಿಳಿಸಿದ್ದಾರೆ.

ಕೋಟಾದ ಸಂಗೋಡ್ ಬ್ಲಾಕ್ ನ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಿರ್ಜಾ ಮುಜಾಹಿದ್ ಹಾಗೂ ಫಿರೋಜ್ ಖಾನ್ ಅಮಾನತುಗೊಂಡಿರುವ ಶಿಕ್ಷಕರಾಗಿದ್ದಾರೆ. ಶಿಕ್ಷಣ ಸಚಿವರ ಆದೇಶದ ಮೇರೆಗೆ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಸರ್ವ ಹಿಂದೂ ಸಮಾಜ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿ, 2019 ರಿಂದ ಶಾಲೆಯಲ್ಲಿ ಧಾರ್ಮಿಕ ಮತಾಂತರ ಹಾಗೂ ಲವ್ ಜಿಹಾದ್ ನಡೆಯುತ್ತಿದೆ ಎಂದು ಆರೋಪಿಸಿತ್ತು.

ಶಾಲೆಯ ಮೂವರು ಶಿಕ್ಷಕರಿಗೆ ನಿಷೇಧಿತ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆ, ಪಾಕಿಸ್ತಾನದ ಸಂಘಟನೆಗಳೊಂದಿಗೆ ನಂಟು ಹೊಂದಿದ್ದಾರೆ ಎಂದು ಸರ್ವ ಹಿಂದೂ ಸಮಾಜ ಶಿಕ್ಷಕರ ವಿರುದ್ಧ ಆರೋಪ ಮಾಡಿತ್ತು. ಈ ಬಗ್ಗೆ ಈ ಹಿಂದೆ ಸಂಗೋಡು ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಶಾಲಾ ದಾಖಲೆಯಲ್ಲಿ ಮುಸ್ಲಿಂ ಎಂದು ಹೆಸರಿಸಲಾದ ಒಬ್ಬ ಹಿಂದೂ ಹುಡುಗಿಯನ್ನು ಮುಸ್ಲಿಂ ಯುವಕರು ಅಪಹರಿಸಿದ್ದಾರೆ ಮತ್ತು ಇನ್ನೂ ಪತ್ತೆಯಾಗಿಲ್ಲ ಎಂದು ಜ್ಞಾಪಕ ಪತ್ರದಲ್ಲಿ ಆರೋಪಿಸಲಾಗಿದೆ.

ಸಂಗೋಡ್‌ನ ಖಜೂರಿ ಓಡ್‌ಪುರ ಗ್ರಾಮದ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಮೂವರು ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ದಿಲಾವರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT