ವಿಜಯ ಧರಣಿ, ಕೇಂದ್ರ ಸಚಿವ ವಿಜಯ ಧರಣಿ ಮತ್ತಿತರರು 
ದೇಶ

ನವದೆಹಲಿ: ತಮಿಳುನಾಡು ಕಾಂಗ್ರೆಸ್ ಶಾಸಕಿ ವಿಜಯಧರಣಿ ಬಿಜೆಪಿಗೆ ಸೇರ್ಪಡೆ

ತಮಿಳುನಾಡಿನ ಕಾಂಗ್ರೆಸ್ ಶಾಸಕಿ ವಿಜಯಧರಣಿ ಶನಿವಾರ ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕನ್ನಿಯಕುಮಾರಿ ಜಿಲ್ಲೆಯ ವಿಲವಂಕೋಡ್‌ನಿಂದ ಮೂರು ಬಾರಿ ಶಾಸಕರಾಗಿದ್ದ ವಿಜಯಧರಣಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ರಾಜ್ಯ ಸಚಿವ ಎಲ್. ಮುರುಗನ್ ಅವರ ಸಮ್ಮುಖದಲ್ಲಿ ಕೇಸರಿ ಪಕ್ಷ ಸೇರಿದರು.

ನವದೆಹಲಿ: ತಮಿಳುನಾಡಿನ ಕಾಂಗ್ರೆಸ್ ಶಾಸಕಿ ವಿಜಯಧರಣಿ ಶನಿವಾರ ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕನ್ನಿಯಕುಮಾರಿ ಜಿಲ್ಲೆಯ ವಿಲವಂಕೋಡ್‌ನಿಂದ ಮೂರು ಬಾರಿ ಶಾಸಕರಾಗಿದ್ದ ವಿಜಯಧರಣಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ರಾಜ್ಯ ಸಚಿವ ಎಲ್. ಮುರುಗನ್ ಅವರ ಸಮ್ಮುಖದಲ್ಲಿ ಕೇಸರಿ ಪಕ್ಷ ಸೇರಿದರು.

ಪಕ್ಷದ ತಮಿಳುನಾಡು ಉಸ್ತುವಾರಿ ಅರವಿಂದ್ ಮೆನನ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶುಕ್ರವಾರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ವಿಜಯ ಧರಣಿ ಘೋಷಿಸಿದ್ದರು. ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಪಕ್ಷಕ್ಕೆ ಸ್ವಾಗತಿಸಿದ್ದಾರೆ.

ಬಿಜೆಪಿ ಪ್ರಧಾನ ಕಛೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ವಿಜಯಧರಣಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಿಂದ ಪ್ರಭಾವಿತರಾಗಿದ್ದು, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಂತಹ ಕೆಲವು ರಾಜ್ಯಗಳಲ್ಲಿ ಕೇಂದ್ರದ ಯೋಜನೆಗಳನ್ನು ಜನರಿಗೆ ತಲುಪಿಸುತ್ತಿಲ್ಲ. ಸಂಸತ್ತು ಮತ್ತು ಅಸೆಂಬ್ಲಿಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ನೀಡಲು ಕಾನೂನು ಜಾರಿಗೆ ತಂದಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನುಅಭಿನಂದಿಸುವುದಾಗಿ ತಿಳಿಸಿದರು.

ಈ ಮಧ್ಯೆ ವಿಜಯ ಧರಣಿ ಅವರನ್ನು ಅನರ್ಹಗೊಳಿಸಲು ಪಕ್ಷವು ತಮಿಳುನಾಡು ವಿಧಾನಸಭಾ ಸ್ಪೀಕರ್ ಸಂಪರ್ಕಿಸುತ್ತದೆ ಎಂದು ತಮಿಳುನಾಡು ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಕೆ. ಸೆಲ್ವಪೆರುಂತಗೈ ಹೇಳಿದ್ದಾರೆ. ವಿಜಯಧರಣಿ ತಮ್ಮ ವಿದ್ಯಾರ್ಥಿ ದಿನಗಳಿಂದಲೂ ಕಾಂಗ್ರೆಸ್‌ನೊಂದಿಗೆ ಸಂಪರ್ಕ ಹೊಂದಿದ್ದರು. ಅವರು 2011 ರಿಂದ ವಿಲವಂಕೋಡ್ ನ್ನು ಪ್ರತಿನಿಧಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT