ವಿಜಯ ಧರಣಿ, ಕೇಂದ್ರ ಸಚಿವ ವಿಜಯ ಧರಣಿ ಮತ್ತಿತರರು 
ದೇಶ

ನವದೆಹಲಿ: ತಮಿಳುನಾಡು ಕಾಂಗ್ರೆಸ್ ಶಾಸಕಿ ವಿಜಯಧರಣಿ ಬಿಜೆಪಿಗೆ ಸೇರ್ಪಡೆ

ತಮಿಳುನಾಡಿನ ಕಾಂಗ್ರೆಸ್ ಶಾಸಕಿ ವಿಜಯಧರಣಿ ಶನಿವಾರ ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕನ್ನಿಯಕುಮಾರಿ ಜಿಲ್ಲೆಯ ವಿಲವಂಕೋಡ್‌ನಿಂದ ಮೂರು ಬಾರಿ ಶಾಸಕರಾಗಿದ್ದ ವಿಜಯಧರಣಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ರಾಜ್ಯ ಸಚಿವ ಎಲ್. ಮುರುಗನ್ ಅವರ ಸಮ್ಮುಖದಲ್ಲಿ ಕೇಸರಿ ಪಕ್ಷ ಸೇರಿದರು.

ನವದೆಹಲಿ: ತಮಿಳುನಾಡಿನ ಕಾಂಗ್ರೆಸ್ ಶಾಸಕಿ ವಿಜಯಧರಣಿ ಶನಿವಾರ ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕನ್ನಿಯಕುಮಾರಿ ಜಿಲ್ಲೆಯ ವಿಲವಂಕೋಡ್‌ನಿಂದ ಮೂರು ಬಾರಿ ಶಾಸಕರಾಗಿದ್ದ ವಿಜಯಧರಣಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ರಾಜ್ಯ ಸಚಿವ ಎಲ್. ಮುರುಗನ್ ಅವರ ಸಮ್ಮುಖದಲ್ಲಿ ಕೇಸರಿ ಪಕ್ಷ ಸೇರಿದರು.

ಪಕ್ಷದ ತಮಿಳುನಾಡು ಉಸ್ತುವಾರಿ ಅರವಿಂದ್ ಮೆನನ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶುಕ್ರವಾರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ವಿಜಯ ಧರಣಿ ಘೋಷಿಸಿದ್ದರು. ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಪಕ್ಷಕ್ಕೆ ಸ್ವಾಗತಿಸಿದ್ದಾರೆ.

ಬಿಜೆಪಿ ಪ್ರಧಾನ ಕಛೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ವಿಜಯಧರಣಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಿಂದ ಪ್ರಭಾವಿತರಾಗಿದ್ದು, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಂತಹ ಕೆಲವು ರಾಜ್ಯಗಳಲ್ಲಿ ಕೇಂದ್ರದ ಯೋಜನೆಗಳನ್ನು ಜನರಿಗೆ ತಲುಪಿಸುತ್ತಿಲ್ಲ. ಸಂಸತ್ತು ಮತ್ತು ಅಸೆಂಬ್ಲಿಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ನೀಡಲು ಕಾನೂನು ಜಾರಿಗೆ ತಂದಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನುಅಭಿನಂದಿಸುವುದಾಗಿ ತಿಳಿಸಿದರು.

ಈ ಮಧ್ಯೆ ವಿಜಯ ಧರಣಿ ಅವರನ್ನು ಅನರ್ಹಗೊಳಿಸಲು ಪಕ್ಷವು ತಮಿಳುನಾಡು ವಿಧಾನಸಭಾ ಸ್ಪೀಕರ್ ಸಂಪರ್ಕಿಸುತ್ತದೆ ಎಂದು ತಮಿಳುನಾಡು ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಕೆ. ಸೆಲ್ವಪೆರುಂತಗೈ ಹೇಳಿದ್ದಾರೆ. ವಿಜಯಧರಣಿ ತಮ್ಮ ವಿದ್ಯಾರ್ಥಿ ದಿನಗಳಿಂದಲೂ ಕಾಂಗ್ರೆಸ್‌ನೊಂದಿಗೆ ಸಂಪರ್ಕ ಹೊಂದಿದ್ದರು. ಅವರು 2011 ರಿಂದ ವಿಲವಂಕೋಡ್ ನ್ನು ಪ್ರತಿನಿಧಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್