ಟಿಎಂಸಿ ನಾಯಕನ ವಿರುದ್ಧ ಮಹಿಳೆಯರ ಪ್ರತಿಭಟನೆ 
ದೇಶ

ಟಿಎಂಸಿಗೆ ಮತ ಹಾಕದಿದ್ದಕ್ಕೆ ಆದಿವಾಸಿಗಳಿಗೆ ಚಿತ್ರಹಿಂಸೆ: ಎನ್‌ಸಿಎಸ್‌ಟಿಯ ಸಂದೇಶಖಾಲಿ ತನಿಖಾ ತಂಡ

ಟಿಎಂಸಿಗೆ ಮತ ಹಾಕದಿದ್ದಕ್ಕಾಗಿ ಆದಿವಾಸಿಗಳಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ ಎಂದು ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ(ಎನ್‌ಸಿಎಸ್‌ಟಿ) ಹೇಳಿದೆ.

ನವದೆಹಲಿ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಭೂಹಗರಣ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಟಿಎಂಸಿ ನಾಯಕ ಶೇಖ್ ಷಹಜಹಾನ್ ಮತ್ತು ಅವರ ಸಹಚರರು ಬಡ ಬುಡಕಟ್ಟು ಕುಟುಂಬಗಳಿಂದ ಎಂಎನ್‌ಆರ್‌ಇಜಿಎ ವೇತನವನ್ನು ಬಲವಂತವಾಗಿ ತೆಗೆದುಕೊಳ್ಳುತ್ತಾರೆ ಮತ್ತು ಟಿಎಂಸಿಗೆ ಮತ ಹಾಕದಿದ್ದಕ್ಕಾಗಿ ಆದಿವಾಸಿಗಳಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ ಎಂದು ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ(ಎನ್‌ಸಿಎಸ್‌ಟಿ) ಹೇಳಿದೆ.

ಪಶ್ಚಿಮ ಬಂಗಾಳ ಪೊಲೀಸರು ಷಹಜಹಾನ್ ಮತ್ತು ಅವರ ಸಹಚರರನ್ನು "ರಕ್ಷಿಸಿದ್ದಾರೆ" ಎಂದು ಎನ್‌ಸಿಎಸ್‌ಟಿ ಉಪಾಧ್ಯಕ್ಷ ಅನಂತ ನಾಯಕ್ ನೇತೃತ್ವದ ಮೂರು ಸದಸ್ಯರ ತನಿಖಾ ತಂಡಕ್ಕೆ ದೂರುದಾರರು ತಿಳಿಸಿದ್ದಾರೆ.

ತನಿಖಾ ತಂಡ ದೆಹಲಿಗೆ ಮರಳಿದ್ದು, ವರದಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದು, ಅದನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಎನ್‌ಸಿಎಸ್‌ಟಿ ಹೇಳಿದೆ.

ಷಹಜಹಾನ್ ಮತ್ತು ಅವರ ಸಹಚರರು ಬುಡಕಟ್ಟು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಮತ್ತು ಭೂಕಬಳಿಕೆಗೆ ಸಂಬಂಧಿಸಿದಂತೆ 50ಕ್ಕೂ ಹೆಚ್ಚು ದೂರುಗಳನ್ನು ಸಮಿತಿ ಸ್ವೀಕರಿಸಿದೆ ಎಂದು ನಾಯಕ್ ಅವರು ಪಿಟಿಐಗೆ ತಿಳಿಸಿದ್ದಾರೆ.

ದೂರು ನೀಡಿದವರಲ್ಲಿ ಹೆಚ್ಚಿನವರು ಹಿಂದೂಗಳಾಗಿದ್ದು, ಆರೋಪಿಗಳು ಮತ್ತು ಅವರ ಸಹಚರರು ಚುನಾವಣೆಯಲ್ಲಿ ಇತರ ಪಕ್ಷಗಳಿಗೆ ಮತ ಹಾಕಿದ ಜನರನ್ನು ಹಿಂಸಿಸಿದ್ದಾರೆ ಎಂದು ತನಿಖಾ ತಂಡಕ್ಕೆ ತಿಳಿಸಿರುವುದಾಗಿ ಎನ್‌ಸಿಎಸ್‌ಟಿ ಉಪಾಧ್ಯಕ್ಷರು ಹೇಳಿದ್ದಾರೆ.

ಷಹಜಹಾನ್ ಮತ್ತು ಅವರ ಸಹಚರರು ಸ್ಥಳೀಯ ಮಹಿಳೆಯರಿಗೆ ತಡರಾತ್ರಿ ಸಭೆಗಳಿಗೆ ಬರುವಂತೆ ಸೂಚಿಸುತ್ತಾರೆ. ಒಂದು ವೇಳೆ ಅವರು ಬರದಿದ್ದರೆ ಅಥವಾ ಹೇಳಿದಂತೆ ಕೇಳದಿದ್ದರೆ ಅವರ ಕುಟುಂಬ ಸದಸ್ಯರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬುದು ಸಮಿತಿಗೆ ತಿಳಿದುಬಂದಿದೆ ಎಂದು ಅವರು ಹೇಳಿದ್ದಾರೆ.

ಕೋಲ್ಕತ್ತಾದಿಂದ ಸುಮಾರು 100 ಕಿಲೋಮೀಟರ್ ದೂರದಲ್ಲಿರುವ ಸುಂದರ್‌ಬನ್ಸ್‌ನ ಗಡಿಯಲ್ಲಿರುವ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿ ಪ್ರದೇಶ ಟಿಎಂಸಿ ನಾಯಕ ಷಹಜಹಾನ್ ವಿರುದ್ಧ ಕಳೆದ ಒಂದು ತಿಂಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT