ಪಂಜಾಬ್-ಹರಿಯಾಣ ಶಂಭು ಗಡಿಯಲ್ಲಿ ರೈತರು ತಮ್ಮ 'ದೆಹಲಿ ಚಲೋ' ಮೆರವಣಿಗೆಯಲ್ಲಿ ಪ್ರತಿಭಟನೆ ನಡೆಸಿದರು. 
ದೇಶ

ಲೋಕಸಭಾ ಚುನಾವಣೆ; ಮಾದರಿ ನೀತಿ ಸಂಹಿತೆ ಜಾರಿ ನಂತರವೂ ರೈತರ ಪ್ರತಿಭಟನೆ ನಿಲ್ಲಲ್ಲ!

ಮುಂಬರುವ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದರೂ ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ದೆಹಲಿ ಚಲೋ ಮೆರವಣಿಗೆ ಮುಂದುವರಿಯಲಿದೆ ಎಂದು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ (ಕೆಎಂಎಸ್‌ಸಿ) ಶನಿವಾರ ಹೇಳಿದೆ.

ಚಂಡೀಗಢ: ಮುಂಬರುವ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದರೂ ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ದೆಹಲಿ ಚಲೋ ಮೆರವಣಿಗೆ ಮುಂದುವರಿಯಲಿದೆ ಎಂದು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ (ಕೆಎಂಎಸ್‌ಸಿ) ಶನಿವಾರ ಹೇಳಿದೆ.

ಶಂಭು ಗಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೆಎಂಎಸ್‌ಸಿ ಪ್ರಧಾನ ಕಾರ್ಯದರ್ಶಿ ಸರ್ವಾನ್ ಸಿಂಗ್ ಪಂಧೇರ್, ರೈತರ ಸಂಕಲ್ಪಕ್ಕೆ ಒತ್ತು ನೀಡಿ, ನಮ್ಮ ಬೇಡಿಕೆಗಳನ್ನು ಪರಿಹರಿಸುವವರೆಗೆ ಈ ಆಂದೋಲನ ಮುಂದುವರಿಯುತ್ತದೆ. ಕೇಂದ್ರವು ನಮ್ಮ ಬೇಡಿಕೆಗಳನ್ನು ಒಪ್ಪಿಕೊಂಡರೆ, ನಾವು ನಮ್ಮ ನಿರ್ಧಾರವನ್ನು ಮರುಪರಿಶೀಲಿಸುತ್ತೇವೆ ಎಂದು ಹೇಳಿದರು.

ಮುಂಬರುವ ಲೋಕಸಭಾ ಚುನಾವಣೆ ಮತ್ತು ಮಾದರಿ ನೀತಿ ಸಂಹಿತೆ ಜಾರಿ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಂಧೇರ್, 'ನಾವು ಟಿಕೆಟ್ ಹಂಚಿಕೆ ಅಥವಾ ಮತಗಟ್ಟೆಗಳಲ್ಲಿ ಪ್ರಚಾರದಲ್ಲಿ ಭಾಗಿಯಾಗದ ಕಾರಣ ಮಾದರಿ ನೀತಿ ಸಂಹಿತೆಯ ಬಗ್ಗೆ ನಮಗೆ ಕಾಳಜಿ ಇಲ್ಲ. ನೀತಿ ಸಂಹಿತೆ ಜಾರಿಯ ನಡುವೆಯೂ ಪ್ರತಿಭಟನೆ ಮುಂದುವರಿಕೆಯತ್ತ ನಾವು ಗಮನ ಹರಿಸುತ್ತೇವೆ ಎಂದರು.

27 ವರ್ಷದ ಪ್ರೀತ್ಪಾಲ್ ಸಿಂಗ್ ಅವರು ಖಾನೌರಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ಪಂಜಾಬ್ ಮುಖ್ಯ ಕಾರ್ಯದರ್ಶಿ ಅನುರಾಗ್ ವರ್ಮಾ ಅವರ ಮನವಿ ಮೇರೆಗೆ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಪಿಜಿಐ ರೋಹ್ಟಕ್‌ನಿಂದ ಪಿಜಿಐ ಚಂಡೀಗಢಕ್ಕೆ ಸ್ಥಳಾಂತರಿಸಲಾಗಿದೆ. ಪಂಜಾಬ್ ಆರೋಗ್ಯ ಸಚಿವ ಬಲ್ಬೀರ್ ಸಿಂಗ್ ಸ್ಥಳಾಂತರವನ್ನು ಖಚಿತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ