ಪಂಜಾಬ್-ಹರಿಯಾಣ ಶಂಭು ಗಡಿಯಲ್ಲಿ ರೈತರು ತಮ್ಮ 'ದೆಹಲಿ ಚಲೋ' ಮೆರವಣಿಗೆಯಲ್ಲಿ ಪ್ರತಿಭಟನೆ ನಡೆಸಿದರು. 
ದೇಶ

ಲೋಕಸಭಾ ಚುನಾವಣೆ; ಮಾದರಿ ನೀತಿ ಸಂಹಿತೆ ಜಾರಿ ನಂತರವೂ ರೈತರ ಪ್ರತಿಭಟನೆ ನಿಲ್ಲಲ್ಲ!

ಮುಂಬರುವ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದರೂ ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ದೆಹಲಿ ಚಲೋ ಮೆರವಣಿಗೆ ಮುಂದುವರಿಯಲಿದೆ ಎಂದು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ (ಕೆಎಂಎಸ್‌ಸಿ) ಶನಿವಾರ ಹೇಳಿದೆ.

ಚಂಡೀಗಢ: ಮುಂಬರುವ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದರೂ ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ದೆಹಲಿ ಚಲೋ ಮೆರವಣಿಗೆ ಮುಂದುವರಿಯಲಿದೆ ಎಂದು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ (ಕೆಎಂಎಸ್‌ಸಿ) ಶನಿವಾರ ಹೇಳಿದೆ.

ಶಂಭು ಗಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೆಎಂಎಸ್‌ಸಿ ಪ್ರಧಾನ ಕಾರ್ಯದರ್ಶಿ ಸರ್ವಾನ್ ಸಿಂಗ್ ಪಂಧೇರ್, ರೈತರ ಸಂಕಲ್ಪಕ್ಕೆ ಒತ್ತು ನೀಡಿ, ನಮ್ಮ ಬೇಡಿಕೆಗಳನ್ನು ಪರಿಹರಿಸುವವರೆಗೆ ಈ ಆಂದೋಲನ ಮುಂದುವರಿಯುತ್ತದೆ. ಕೇಂದ್ರವು ನಮ್ಮ ಬೇಡಿಕೆಗಳನ್ನು ಒಪ್ಪಿಕೊಂಡರೆ, ನಾವು ನಮ್ಮ ನಿರ್ಧಾರವನ್ನು ಮರುಪರಿಶೀಲಿಸುತ್ತೇವೆ ಎಂದು ಹೇಳಿದರು.

ಮುಂಬರುವ ಲೋಕಸಭಾ ಚುನಾವಣೆ ಮತ್ತು ಮಾದರಿ ನೀತಿ ಸಂಹಿತೆ ಜಾರಿ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಂಧೇರ್, 'ನಾವು ಟಿಕೆಟ್ ಹಂಚಿಕೆ ಅಥವಾ ಮತಗಟ್ಟೆಗಳಲ್ಲಿ ಪ್ರಚಾರದಲ್ಲಿ ಭಾಗಿಯಾಗದ ಕಾರಣ ಮಾದರಿ ನೀತಿ ಸಂಹಿತೆಯ ಬಗ್ಗೆ ನಮಗೆ ಕಾಳಜಿ ಇಲ್ಲ. ನೀತಿ ಸಂಹಿತೆ ಜಾರಿಯ ನಡುವೆಯೂ ಪ್ರತಿಭಟನೆ ಮುಂದುವರಿಕೆಯತ್ತ ನಾವು ಗಮನ ಹರಿಸುತ್ತೇವೆ ಎಂದರು.

27 ವರ್ಷದ ಪ್ರೀತ್ಪಾಲ್ ಸಿಂಗ್ ಅವರು ಖಾನೌರಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ಪಂಜಾಬ್ ಮುಖ್ಯ ಕಾರ್ಯದರ್ಶಿ ಅನುರಾಗ್ ವರ್ಮಾ ಅವರ ಮನವಿ ಮೇರೆಗೆ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಪಿಜಿಐ ರೋಹ್ಟಕ್‌ನಿಂದ ಪಿಜಿಐ ಚಂಡೀಗಢಕ್ಕೆ ಸ್ಥಳಾಂತರಿಸಲಾಗಿದೆ. ಪಂಜಾಬ್ ಆರೋಗ್ಯ ಸಚಿವ ಬಲ್ಬೀರ್ ಸಿಂಗ್ ಸ್ಥಳಾಂತರವನ್ನು ಖಚಿತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT