ಮಲ್ಲಿಕಾರ್ಜುನ ಖರ್ಗೆ 
ದೇಶ

ಅಗ್ನಿಪಥ್ ಯೋಜನೆಯಿಂದ ದೇಶದ ಯುವಕರಿಗೆ ತೀವ್ರ ಅನ್ಯಾಯ: ರಾಷ್ಟ್ರಪತಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಅಗ್ನಿಪಥ್ ಯೋಜನೆಯಿಂದಾಗಿ ಸಶಸ್ತ್ರ ಪಡೆಗಳಲ್ಲಿ ನಿಯಮಿತ ಉದ್ಯೋಗವನ್ನು ಬಯಸುತ್ತಿರುವ ದೇಶದ ಯುವಕರಿಗೆ 'ಘೋರ ಅನ್ಯಾಯ' ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸೋಮವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದು, ಯುವಕರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ.

ನವದೆಹಲಿ: ಅಗ್ನಿಪಥ್ ಯೋಜನೆಯಿಂದಾಗಿ ಸಶಸ್ತ್ರ ಪಡೆಗಳಲ್ಲಿ ನಿಯಮಿತ ಉದ್ಯೋಗವನ್ನು ಬಯಸುತ್ತಿರುವ ದೇಶದ ಯುವಕರಿಗೆ 'ಘೋರ ಅನ್ಯಾಯ' ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸೋಮವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದು, ಯುವಕರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ.

ಸಶಸ್ತ್ರ ಪಡೆಗಳಲ್ಲಿ ನಿಯಮಿತ ನೇಮಕಾತಿ ಪ್ರಕ್ರಿಯೆ ಅಂತ್ಯಗೊಂಡಿರುವುದರಿಂದ ಸುಮಾರು 2 ಲಕ್ಷ ಯುವಕ-ಯುವತಿಯರ ಭವಿಷ್ಯ ಅತಂತ್ರವಾಗಿದೆ ಎಂದು ಖರ್ಗೆ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಭಾರತೀಯ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಕೂಡ ಆಗಿದ್ದಾರೆ.

ಈ ಯುವಕರು ತಮ್ಮ ಕನಸಗಳ ಈಡೇರಿಸಿಕೊಳ್ಳುವ ಪ್ರಯತ್ನದಲ್ಲಿ ವರ್ಷಗಳ ಕಾಲ ಕಳೆದಿದ್ದಾರೆ ಮತ್ತು 'ಪರಿಣಾಮವಾಗಿ ಹತಾಶೆ ಮತ್ತು ಭರವಸೆ ಕಾಣದಿರುವುದು ಹಲವಾರು ಸಾವುಗಳಿಗೆ ಕಾರಣವಾಯಿತು' ಎಂದು ಖರ್ಗೆ ತಿಳಿಸಿದ್ದಾರೆ.

'ನಮ್ಮ ಯುವಕರು ಈ ರೀತಿ ತೊಂದರೆ ಅನುಭವಿಸಲು ಬಿಡಬಾರದು. ಅವರಿಗೆ ಸೂಕ್ತ ನ್ಯಾಯ ಲಭ್ಯವಾಗುವಂತೆ ನೋಡಿಕೊಳ್ಳಲು ನಾನು ನಿಮಗೆ ಮನವಿ ಮಾಡುತ್ತೇನೆ' ಎಂದು ಅವರು ಹೇಳಿದ್ದಾರೆ.

ಜೂನ್ 14, 2022 ರಂದು ಘೋಷಿಸಲಾದ ಅಗ್ನಿಪಥ್ ಯೋಜನೆಯು ಹದಿನೇಳುವರೆ ಯಿಂದ 21 ವರ್ಷ ವಯಸ್ಸಿನ ಯುವಕರನ್ನು ಕೇವಲ ನಾಲ್ಕು ವರ್ಷಗಳ ಅವಧಿಗೆ ಸೇನೆಗೆ ನೇಮಕ ಮಾಡಿಕೊಳ್ಳಲು ಅವಕಾಶ ಕಲ್ಪಿಸುತ್ತದೆ. ಅವರಲ್ಲಿ ಶೇ 25 ರಷ್ಟನ್ನು ಇನ್ನೂ 15 ವರ್ಷಗಳವರೆಗೆ ಉಳಿಸಿಕೊಳ್ಳುವ ಅವಕಾಶವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!