"Big win for student power...": Rahul Gandhi after UP govt cancels police constable exams 
ದೇಶ

ರಾಹುಲ್ ಗಾಂಧಿ, ಶಶಿ ತರೂರ್ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಸಿಪಿಐ

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಸಿಪಿಐ) ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾಲ್ಕು ನಿರ್ಣಾಯಕ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಸೋಮವಾರ ಪ್ರಕಟಿಸಿದೆ.

ತಿರುವನಂತಪುರಂ: ಕೇರಳದ ಆಡಳಿತಾರೂಢ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್‌ನ ಎರಡನೇ ಅತಿದೊಡ್ಡ ಮಿತ್ರ ಪಕ್ಷ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಸಿಪಿಐ) ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾಲ್ಕು ನಿರ್ಣಾಯಕ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಸೋಮವಾರ ಪ್ರಕಟಿಸಿದೆ.

ಪ್ರಮುಖವಾಗಿ, ಪ್ರಸ್ತುತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿನಿಧಿಸುತ್ತಿರುವ ವಯನಾಡ್ ಕ್ಷೇತ್ರದಿಂದ ಸಿಪಿಐ ಹಿರಿಯ ನಾಯಕ ಅನ್ನಿ ರಾಜಾ ಅವರು ಸ್ಪರ್ಧಿಸಲಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಪ್ರತಿನಿಧಿಸುವ ಮತ್ತೊಂದು ಪ್ರಮುಖ ಕ್ಷೇತ್ರ ತಿರುವನಂತಪುರಂನಿಂದ ಪಕ್ಷದ ಹಿರಿಯ ಮತ್ತು ಮಾಜಿ ಸಂಸದ ಪನ್ನಿಯನ್ ರವೀಂದ್ರನ್ ಅವರು ಕಣಕ್ಕಿಳಿಯಲಿದ್ದಾರೆ ಎಂದು ಸಿಪಿಐ ಹೇಳಿದೆ.

ಸಿಬಿಐ ರಾಜ್ಯ ಕಾರ್ಯದರ್ಶಿ ಬಿನೋಯ್ ವಿಶ್ವಂ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳನ್ನ ಘೋಷಿಸಿದ್ದಾರೆ.

ಮಾಜಿ ಕೃಷಿ ಸಚಿವ ವಿ ಎಸ್ ಸುನೀಲ್ ಕುಮಾರ್ ಮತ್ತು ಪಕ್ಷದ ಯುವ ಘಟಕ ಎಐವೈಎಫ್ ನಾಯಕ ಸಿ ಎ ಅರುಣ್ ಕುಮಾರ್ ಕ್ರಮವಾಗಿ ತ್ರಿಶೂರ್ ಮತ್ತು ಮಾವೇಲಿಕ್ಕರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT