ಸಾಂದರ್ಭಿಕ ಚಿತ್ರ 
ದೇಶ

ಮಧ್ಯ ಪ್ರದೇಶ: ಉದ್ಯೋಗ ಕಳೆದುಕೊಳ್ಳುವ ಭೀತಿಯಿಂದ ಪೇಟಿಎಂ ಉದ್ಯೋಗಿ ಆತ್ಮಹತ್ಯೆಗೆ ಶರಣು

ಉದ್ಯೋಗ ಕಳೆದುಕೊಳ್ಳುವ ಭೀತಿಯಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನ 35 ವರ್ಷದ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದೋರ್‌: ಮಧ್ಯ ಪ್ರದೇಶದ ಇಂದೋರ್‌ನಲ್ಲಿ ಉದ್ಯೋಗ ಕಳೆದುಕೊಳ್ಳುವ ಭೀತಿಯಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನ 35 ವರ್ಷದ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

"ಪ್ರಾಥಮಿಕ ತನಿಖೆಯ ಪ್ರಕಾರ, ಪೇಟಿಎಂ ಸಿಬ್ಬಂದಿ ಗೌರವ್ ಗುಪ್ತಾ ಅವರು ಕಳೆದ ಕೆಲವು ದಿನಗಳಿಂದ ಕಂಪನಿ ಮುಚ್ಚಬಹುದು ಮತ್ತು ಕೆಲಸ ಕಳೆದುಕೊಳ್ಳಬಹುದು ಎಂಬ ಭಯದಿಂದ ಒತ್ತಡದಲ್ಲಿದ್ದರು. ಈ ಕುರಿತು ನಾವು ತನಿಖೆ ನಡೆಸುತ್ತಿದ್ದೇವೆ" ಎಂದು ಪೊಲೀಸ್ ಇನ್ಸ್‌ಪೆಕ್ಟರ್ ತಾರೇಶ್ ಕುಮಾರ್ ಸೋನಿ ಅವರು ಹೇಳಿದ್ದಾರೆ.

ಗೌರವ್ ಗುಪ್ತಾ ಅವರು ಭಾನುವಾರ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ಪೊಲೀಸರಿಗೆ ಯಾವುದೇ ಆತ್ಮಹತ್ಯೆ ಪತ್ರ ಸಿಕ್ಕಿಲ್ಲ ಎಂದು ಸೋನಿ ಹೇಳಿದ್ದಾರೆ.

ಇತ್ತೀಚಿಗಷ್ಟೇ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಮಾರ್ಚ್ 15 ರ ನಂತರ ಯಾವುದೇ ಗ್ರಾಹಕರಿಂದ ಠೇವಣಿ ಮತ್ತು ಕ್ರೆಡಿಟ್‌ಗಳನ್ನು ಸ್ವೀಕರಿಸದಂತೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಅನ್ನು ನಿರ್ಬಂಧಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT