ಹಿಮಂತ ಬಿಸ್ವಾ ಶರ್ಮಾ 
ದೇಶ

'ಮುಂಬಾಗಿಲು' ಮೂಲಕವೇ ಅಸ್ಸಾಂನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಸಿಎಂ ಹಿಮಂತ ಬಿಸ್ವಾ ಶರ್ಮಾ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಸರ್ಕಾರ "ಮುಂದಿನ ಬಾಗಿಲಿನ" ಮೂಲಕವೇ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲಿದೆ ಎಂದು ಹೇಳಿದ್ದಾರೆ.

ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಸರ್ಕಾರ "ಮುಂದಿನ ಬಾಗಿಲಿನ" ಮೂಲಕವೇ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲಿದೆ ಎಂದು ಸೋಮವಾರ ವಿಧಾನಸಭೆಯಲ್ಲಿ ಹೇಳಿದ್ದಾರೆ. ಆದರೆ ಯುಸಿಸಿ ಸಾಂಪ್ರದಾಯ ಮತ್ತು ಆಚರಣೆಗಳಿಗೆ ಯಾವುದೇ ಅಡ್ಡಿಯಾವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

'ಅಸ್ಸಾಂ ಹೀಲಿಂಗ್(ಕೆಟ್ಟ ಅಭ್ಯಾಸಗಳ ತಡೆಗಟ್ಟುವಿಕೆ) ಅಭ್ಯಾಸಗಳ ಮಸೂದೆ 2024' ಕುರಿತ ಚರ್ಚೆಗೆ ಉತ್ತರಿಸಿದ ಶರ್ಮಾ, ದುರುದ್ದೇಶಪೂರಿತ ಉದ್ದೇಶದಿಂದ ವೈಯಕ್ತಿಕ ಆಚರಣೆಗಳನ್ನು ತಡೆಯಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಅಸ್ಸಾಂ ಸಿಎಂ ಹೇಳಿದ್ದಾರೆ.

"UCC ಈಗ ಉತ್ತರಾಖಂಡದಲ್ಲಿ ಜಾರಿಯಾಗಿದೆ. UCC ಯು ಬಾಲ್ಯ ವಿವಾಹವನ್ನು ತಡೆಗಟ್ಟಲಿದೆ ಮತ್ತು ಬಹುಪತ್ನಿತ್ವವನ್ನು ನಿಷೇಧಿಸುವುದು, ಉತ್ತರಾಧಿಕಾರ ಕಾನೂನುಗಳು ಮತ್ತು ಲಿವ್-ಇನ್ ಸಂಬಂಧಗಳ ನೋಂದಣಿ ಅಂಶಗಳನ್ನು ಒಳಗೊಂಡಿದೆ" ಎಂದು ಹಿಮಂತ ಬಿಸ್ವಾ ಶರ್ಮಾ ತಿಳಿಸಿದರು.

ಉತ್ತರಾಖಂಡ ವಿಧಾನಸಭೆಯು ಫೆಬ್ರವರಿ 7 ರಂದು ಪರಿಶಿಷ್ಟ ಪಂಗಡಗಳನ್ನು ಹೊರತುಪಡಿಸಿ ಎಲ್ಲಾ ಸಮುದಾಯಗಳಿಗೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳ ಮೇಲೆ ಏಕರೂಪದ ನಿಯಮಗಳನ್ನು ಜಾರಿಗೊಳಿಸುವ ಮಸೂದೆ ಅಂಗೀಕರಿಸಿದೆ.

ಉತ್ತರಾಖಂಡ ಮತ್ತು ಗುಜರಾತ್ ನಂತರ ಅಸ್ಸಾಂ ಯುಸಿಸಿ ಜಾರಿ ಸಂಬಂಧ ಮಸೂದೆ ಮಂಡಿಸಿದ ಮೂರನೇ ರಾಜ್ಯವಾಗಿದೆ ಮತ್ತು ಇದು ಬುಡಕಟ್ಟು ಸಮುದಾಯಗಳಿಗೆ ಈ ಕಾನೂನಿನಿಂದ ವಿನಾಯಿತಿ ನೀಡಲಾಗಿದೆ ಎಂದು ಶರ್ಮಾ ಕಳೆದ ತಿಂಗಳು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT