ಅಭಿಷೇಕ್ ಮನು ಸಿಂಘ್ವಿ 
ದೇಶ

ಹಿಮಾಚಲ ಪ್ರದೇಶದಲ್ಲಿ ರಾಜ್ಯಸಭೆಗೆ ಅಡ್ಡಮತದಾನ: ಕಾಂಗ್ರೆಸ್ ನ ಅಭಿಷೇಕ್ ಮನು ಸಿಂಘ್ವಿಗೆ ಸೋಲು!

ರಾಜ್ಯಸಭೆಗೆ ಇಂದು ಚುನಾವಣೆ ನಡೆದಿದ್ದು ಹಿಮಾಚಲ ಪ್ರದೇಶದಲ್ಲಿ ಅಡ್ಡಮತದಾನದ ವರದಿಯಾಗಿದೆ.

ಶಿಮ್ಲಾ: ರಾಜ್ಯಸಭೆಗೆ ಇಂದು ಚುನಾವಣೆ ನಡೆದಿದ್ದು ಹಿಮಾಚಲ ಪ್ರದೇಶದಲ್ಲಿ ಅಡ್ಡಮತದಾನದ ವರದಿಯಾಗಿದೆ. ಅಡ್ಡಮತದಾನದ ಪರಿಣಾಮ ಅಭಿಷೇಕ್ ಮನು ಸಿಂಘ್ವಿ ಸೋಲು ಕಂಡಿದ್ದಾರೆ. ಸಿಂಘ್ವಿ ವಿರುದ್ಧ ಬಿಜೆಪಿ ಅಭ್ಯರ್ಥಿ ಹರ್ಷ್ ಮಹಾಜನ್ ಗೆದ್ದಿದ್ದಾರೆ.

ಇಬ್ಬರೂ ಅಭ್ಯರ್ಥಿಗಳ ಪರವಾಗಿ ತಲಾ 34 ಮತಗಳು ಚಲಾವಣೆಯಾಗಿತ್ತು. ಅಂತಿಮವಾಗಿ ಚೀಟಿ ಎತ್ತುವ ಮೂಲಕ ರಾಜ್ಯಸಭೆಗೆ ಆಯ್ಕೆ ಮಾಡಲಾಯಿತು.68 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 40 ಶಾಸಕರನ್ನು ಹೊಂದಿರುವ ಮತ್ತು ಸ್ವತಂತ್ರರ ಬೆಂಬಲವನ್ನು ಪಡೆದಿರುವ ಕಾಂಗ್ರೆಸ್‌ಗೆ ಇದು ದೊಡ್ಡ ಆಘಾತವಾಗಿದೆ.

ಕಾಂಗ್ರೆಸ್ ಶಾಸಕರು ‘ಆತ್ಮಸಾಕ್ಷಿಯ ಮತ’ ಚಲಾಯಿಸುತ್ತಾರೆ ಎಂಬ ವಿಶ್ವಾಸದಲ್ಲಿದ್ದ ಬಿಜೆಪಿ ಪರವಾಗಿ ಒಂಬತ್ತು ಶಾಸಕರು ಮತ ಚಲಾಯಿಸಿದ್ದಾರೆ ಎಂದು ಫಲಿತಾಂಶ ಸ್ಪಷ್ಟಪಡಿಸಿದೆ. ಪ್ರಸ್ತುತ ಹಿಮಾಚಲಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ 25 ಶಾಸಕರನ್ನು ಹೊಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT