ಕಾಡಾನೆ ದಾಳಿಗೆ ಬಲಿಯಾದ ಅಜೀಶ್ 
ದೇಶ

ಕರ್ನಾಟಕ ಸರ್ಕಾರದ 15 ಲಕ್ಷ ರೂಪಾಯಿ ಆರ್ಥಿಕ ನೆರವು ನಮಗೆ ಬೇಡ: ಕೇರಳದ ಮೃತ ಅಜೀಶ್ ಕುಟುಂಬ!

ಬೇಲೂರಿನ ಮಖ್ನಾ ಕಾಡಾನೆ ತುಳಿದು ಸಾವನ್ನಪ್ಪಿದ ಕೇರಳದ ಪದಮಲ ಮೂಲದ ಅಜೀಶ್ ಅವರ ಕುಟುಂಬವು ಕರ್ನಾಟಕ ಸರ್ಕಾರ ಘೋಷಿಸಿದ 15 ಲಕ್ಷ ರೂಪಾಯಿ ಪರಿಹಾರವನ್ನು ನಿರಾಕರಿಸಿದೆ.

ವಯನಾಡು: ಬೇಲೂರಿನ ಮಖ್ನಾ ಕಾಡಾನೆ ತುಳಿದು ಸಾವನ್ನಪ್ಪಿದ ಕೇರಳದ ಪದಮಲ ಮೂಲದ ಅಜೀಶ್ ಅವರ ಕುಟುಂಬವು ಕರ್ನಾಟಕ ಸರ್ಕಾರ ಘೋಷಿಸಿದ 15 ಲಕ್ಷ ರೂಪಾಯಿ ಪರಿಹಾರವನ್ನು ನಿರಾಕರಿಸಿದೆ.

ಕರ್ನಾಟಕ ವಿಧಾನಸಭೆಯಲ್ಲಿ ಪರಿಹಾರದ ಕುರಿತು ಬಿಜೆಪಿ ಗದ್ದಲ ಸೃಷ್ಟಿಸಿದ ನಂತರ ಕುಟುಂಬ ಈ ನಿರ್ಧಾರ ತೆಗೆದುಕೊಂಡಿದೆ. ಅಜೀಶ್ ಅವರ ಕುಟುಂಬವು ಬಿಜೆಪಿಯ ನಡವಳಿಕೆಯನ್ನು ಖಂಡಿಸಿದ್ದು ಇದು ಅಮಾನವೀಯ ಎಂದು ಬಣ್ಣಿಸಿದೆ.

ಫೆಬ್ರವರಿ 10ರಂದು ಕಾಡಾನೆ ಅಜೀಶ್‌ರನ್ನು ತುಳಿದು ಕೊಂದಿತ್ತು. ಆನೆಗೆ ಕರ್ನಾಟಕ ಸರ್ಕಾರ ರೇಡಿಯೋ ಕಾಲರ್ ಅಳವಡಿಸಿದ್ದರಿಂದ ಕರ್ನಾಟಕ ಸರ್ಕಾರ ಅಜೀಶ್ ಕುಟುಂಬಕ್ಕೆ ಭಾರಿ ಪರಿಹಾರ ಘೋಷಿಸಿತ್ತು.

ಈ ವಿಷಯವಾಗಿ ಬಿಜೆಪಿ ವಿಧಾನಸಭೆಯಲ್ಲಿ ಕೋಲಾಹಲ ಸೃಷ್ಟಿಸಿತ್ತು. ರಾಜ್ಯದ ತೆರಿಗೆ ಹಣ ರಾಹುಲ್ ಗಾಂಧಿ ಕ್ಷೇತ್ರಕ್ಕೆ ಎಂದು ಬಿಜೆಪಿ ನಾಯಕರು ಲೇವಡಿ ಮಾಡಿದ್ದರು. ಇದರಿಂದಾಗಿ ಈ ವಿವಾದದ ಹಣವನ್ನು ಕುಟುಂಬ ನಿರಾಕರಿಸಿದೆ.

ವಯನಾಡು ಸಂಸದ ರಾಹುಲ್ ಗಾಂಧಿ ಅವರು ಅಜೀಶ್ ಅವರ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು. ನಂತರ ಕರ್ನಾಟಕ ಮುಖ್ಯಮಂತ್ರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದ ನಂತರ ಸಚಿವ ಈಶ್ವರ್ ಖಂಡ್ರೆ ಅವರು 15 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT