ಗಾಯಾಳುಗಳು. 
ದೇಶ

ಬಿಹಾರ: ಜನವಿಶ್ವಾಸ ಯಾತ್ರೆ ವೇಳೆ ತೇಜಸ್ವಿ ಯಾದವ್ ಬೆಂಗಾವಲು ವಾಹನ ಅಪಘಾತ: ಓರ್ವ ಸಾವು, ಹಲವರಿಗೆ ಗಾಯ

ಜನ ವಿಶ್ವಾಸ ಯಾತ್ರೆ ವೇಳೆ ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿ ಹಲವರಿಗೆ ಗಾಯಗಳಾಗಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ಪಾಟ್ನಾ: ಜನ ವಿಶ್ವಾಸ ಯಾತ್ರೆ ವೇಳೆ ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿ ಹಲವರಿಗೆ ಗಾಯಗಳಾಗಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ಅಪಘಾತದಲ್ಲಿ ಬೆಂಗಾವಲು ವಾಹನದ ಚಾಲಕ ಮೊಹಮ್ಮದ್ ಹಲೀಂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪೊಲೀಸರ ಸೇರಿ 6 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಇದೇ ವೇಳೆ ಮತ್ತೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ನಾಗರಿಕರು ಗಾಯಗೊಂಡಿದ್ದು, ಎಲ್ಲಾ 10 ಮಂದಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಎಂಸಿಹೆಚ್ ಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ತೇಜಸ್ವಿ ಯಾದವ್ ಅವರು ರಾಜ್ಯಾದ್ಯಂತ ‘ಜನ್ ವಿಶ್ವಾಸ್ ಯಾತ್ರೆ’ಯಲ್ಲಿ ತೊಡಗಿಸಿಕೊಂಡಿದ್ದು, ಈ ಜನ ವಿಶ್ವಾಸ ಯಾತ್ರೆಯ ವೇಳೆ ತೇಜಸ್ವಿ ಯಾದವ್ ಅವರ ಬೆಂಗಾವಲು ಪಡೆ ಪುರ್ನಿಯಾದ ಬೆಲೌರಿ ಮೂಲಕ ಹಾದು ಹೋಗುತ್ತಿತ್ತು ಎಂದು ಹೇಳಲಾಗಿದೆ.

ಈ ಬೆಂಗಾವಲು ಪಡೆಯಲ್ಲಿ ಈ ಸ್ಕೌಟ್ ವಾಹನವೂ ಸೇರಿತ್ತು. ಪೂರ್ಣಿಯಾ ಕತಿಹಾರ್ ನಾಲ್ಕು ಪಥದ ರಸ್ತೆಯಲ್ಲಿ ವಾಹನ ರಾಂಗ್ ಸೈಡ್ ಗೆ ಹೋಗಿತ್ತು. ಇದರಿಂದಾಗಿ ಕತಿಹಾರ್ ಕಡೆಯಿಂದ ಬರುತ್ತಿದ್ದ ಕೆಂಪು ಬಣ್ಣದ ಕಾರಿಗೆ ಭೀಕರ ಡಿಕ್ಕಿ ಸಂಭವಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್