ಡಿಸಿಎಂ ಡಿಕೆಶಿವಕುಮಾರ್, ಸುಖ್ವಂದರ್ ಸಿಂಗ್ 
ದೇಶ

ಹಿಮಾಚಲ ಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು: ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಶಿಮ್ಲಾಗೆ ದೌಡು!

ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿರುವಂತೆಯೇ, ಉಪಮುಖ್ಯಮಂತ್ರಿ ಮತ್ತು ಹಿಮಾಚಲ ಪ್ರದೇಶದ ಕಾಂಗ್ರೆಸ್ ವೀಕ್ಷಕ ಡಿಕೆ ಶಿವಕುಮಾರ್ ಅವರನ್ನು ಬಿಕ್ಕಟ್ಟು ನಿರ್ವಹಣೆಗೆ ಮುಂದಾಗುವಂತೆ ಪಕ್ಷದ ನಿರ್ದೇಶಸಿದ ನಂತರ ಅವರು ಹಿಮಾಚಲ ಪ್ರದೇಶಕ್ಕೆ ತೆರಳಿದ್ದಾರೆ.

ಶಿಮ್ಲಾ: ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿರುವಂತೆಯೇ, ಉಪಮುಖ್ಯಮಂತ್ರಿ ಮತ್ತು ಹಿಮಾಚಲ ಪ್ರದೇಶದ ಕಾಂಗ್ರೆಸ್ ವೀಕ್ಷಕ ಡಿಕೆ ಶಿವಕುಮಾರ್ ಅವರನ್ನು ಬಿಕ್ಕಟ್ಟು ನಿರ್ವಹಣೆಗೆ ಮುಂದಾಗುವಂತೆ ಪಕ್ಷದ ನಿರ್ದೇಶಸಿದ ನಂತರ ಅವರು ಹಿಮಾಚಲ ಪ್ರದೇಶಕ್ಕೆ ತೆರಳಿದ್ದಾರೆ. ಹಿಮಾಲಯ ತಪ್ಪಲಿನ ರಾಜ್ಯದಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ. ಅದು ಮುಂದೊಂದು ಮತ್ತಷ್ಟು ಮತ್ತಷ್ಟು ಹೆಚ್ಚಾಗಬಹುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಾನು ಅಲ್ಲಿಯೇ ಇರಬೇಕು ಎಂದು ಕಾಂಗ್ರೆಸ್ ಪಕ್ಷ ನಿರ್ದೇಶನ ನೀಡಿದೆ. ಬಿಜೆಪಿಗೆ ಏಕೆ ಇಷ್ಟು ಆತುರ ಎಂಬುದು ನನಗೆ ತಿಳಿಯುತ್ತಿಲ್ಲ. ಯಾವುದೇ ಸರ್ಕಾರ ಪ್ರಬಲವಾದ ವಿರೋಧ ಪಕ್ಷವನ್ನು ಹೊಂದಿರಬೇಕು, ಆದರೆ, ಈ ರೀತಿಯ ಕುದುರೆ ವ್ಯಾಪಾರ ಸರಿಯಲ್ಲ. ಇದು ಮುಂದೊಂದು ದಿನ ಮತ್ತಷ್ಟು ಹೆಚ್ಚಾಗಬಹುದು. ನಮ್ಮ ಎಲ್ಲಾ ಶಾಸಕರು ಪಕ್ಷಕ್ಕೆ ನಿಷ್ಠರಾಗಿರುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದುರು.

ಈ ಮಧ್ಯೆ ಶಿಮ್ಲಾದಲ್ಲಿ ಹಿಮಾಚಲ ಪ್ರದೇಶದ 15 ಬಿಜೆಪಿ ಶಾಸಕರನ್ನು ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಬುಧವಾರ ತಮ್ಮ ಚೇಂಬರ್‌ನಲ್ಲಿ ಗದ್ದಲ ಸೃಷ್ಟಿಸಿದ ಆರೋಪದಲ್ಲಿ ಸದನದಿಂದ ಅಮಾನತುಗೊಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!