ಸಿಎಂ ಸುಖ್ವಿಂದರ್ ಸಿಂಗ್
ಸಿಎಂ ಸುಖ್ವಿಂದರ್ ಸಿಂಗ್  ANI
ದೇಶ

ಸುಖ್ವಿಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆಯೇ? ಹಿಮಾಚಲ ಸಿಎಂ ಹೇಳಿದ್ದು ಹೀಗೆ...

Nagaraja AB

ಶಿಮ್ಲಾ: ರಾಜ್ಯಸಭಾ ಚುನಾವಣೆಯಲ್ಲಿ ಕೆಲವು ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಿದ ನಂತರ ತಮ್ಮ ಸರ್ಕಾರ ಬಹುಮತ ಕಳೆದುಕೊಳ್ಳುವ ಅಪಾಯವಿದ್ದರೂ ಕೂಡ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಸುಖ್ವಿಂದರ್ ಸಿಂಗ್ ಬುಧವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೊಬ್ಬ ಹೋರಾಟಗಾರ, ನಾನು ವಿನಮ್ರ ಕುಟುಂಬದಿಂದ ಬಂದವನು, ನಾವು ಈ ಯುದ್ಧವನ್ನು ಗೆಲ್ಲುತ್ತೇವೆ ಮತ್ತು ವಿಧಾನಸಭೆಯಲ್ಲೂ ಬಹುಮತವನ್ನು ಸಾಬೀತುಪಡಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಿಮಾಚಲ ಪ್ರದೇಶದಲ್ಲಿ ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಆರು ಕಾಂಗ್ರೆಸ್ ಶಾಸಕರು ಮತ ಚಲಾಯಿಸಿದ್ದು, ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಅವರ ಕಾರ್ಯಶೈಲಿಯಿಂದ ಅವರು ನಿರಾಶೆಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

ಆರು ಶಾಸಕರು ಅಡ್ಡ ಮತದಾನ ಮಾಡಿದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದ ಬಿಕ್ಕಟ್ಟನ್ನು ಎದುರಿಸುತ್ತಿದೆ. "ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಕೆಲವು ಶಾಸಕರೊಂದಿಗೆ ನಾವು ಸಂಪರ್ಕದಲ್ಲಿದ್ದು, ತಮ್ಮ ಸರ್ಕಾರ ಐದು ವರ್ಷಗಳ ಆಡಳಿವನ್ನು ಪೂರ್ಣಗೊಳಿಸಲಿದೆ ಎಂದು ಸುಖ್ವಿಂದರ್ ಸಿಂಗ್ ಹೇಳಿದ್ದಾರೆ.

SCROLL FOR NEXT