ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್  
ದೇಶ

'ಮೇರಾ ಪೆಹ್ಲಾ ವೋಟ್ ದೇಶ್ ಕೆ ಲಿಯೇ' ಅಭಿಯಾನಕ್ಕೆ ಚಾಲನೆ

ಯುವ ಮತದಾರರು, ಮೊದಲ ಬಾರಿ ಮತ ಚಲಾಯಿಸುವವರಿಗೆ ಉತ್ತೇಜನ

ಚೆನ್ನೈ: ಇನ್ನು ಎರಡು ತಿಂಗಳಲ್ಲಿ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು 'ಮೇರಾ ಪೆಹ್ಲಾ ವೋಟ್ ದೇಶ್ ಕೆ ಲಿಯೇ' (ರಾಷ್ಟ್ರಕ್ಕೆ ನನ್ನ ಮೊದಲ ಮತ) ಎಂಬ ಶೀರ್ಷಿಕೆಯನ್ನು ಒಳಗೊಂಡ ಗೀತೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಅಭಿಯಾನವು ಯುವ ಮತದಾರರು, ಮೊದಲ ಬಾರಿಗೆ ಮತ ಚಲಾಯಿಸುವವರು ತಮ್ಮ ಹಕ್ಕು ಚಲಾಯಿಸಲು ಉತ್ತೇಜಿಸುವ ಗುರಿಯನ್ನು ಹೊಂದಿದೆ.

ಫೆಬ್ರವರಿ 28 ರಿಂದ ಮಾರ್ಚ್ 6 ರವರೆಗೆ ಕೇಂದ್ರ ಸರ್ಕಾರ ಈ ಅಭಿಯಾನ ಕೈಗೊಂಡಿದ್ದು, ಸಮಗ್ರ ಮತದಾರರ ಜಾಗೃತಿ ಚಟುವಟಿಕೆಗಳನ್ನು ನಡೆಸುವಂತೆ ದೇಶದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶನ ನೀಡಿರುವುದಾಗಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮಾಡುವ ಬಗ್ಗೆ ಕರೆ ನೀಡಿದ್ದಾರೆ.

ಭಾರತೀಯ ಚುನಾವಣಾ ಆಯೋಗವು (ECI) ಮತದಾರರ ಜಾಗೃತಿಗಾಗಿ ಪ್ರಾರಂಭಿಸಿರುವ ಅಭಿಯಾನಕ್ಕೆ ಕೊಡುಗೆ ನೀಡುವ ಪ್ರಯತ್ನವಾಗಿದೆ ಎಂದು ವಾರ್ತಾ ಮತ್ತು ಪ್ರಸಾರ ಖಾತೆ ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT