ರೈತರ ಪ್ರತಿಭಟನೆ 
ದೇಶ

'ಜುಮ್ಲಾ'ಗಳು ಸಾಕು, ಜನರಿಗೆ ಉತ್ತರಿಸುವ ಸಮಯ ಬಂದಿದೆ: ರೈತರ ಸಮಸ್ಯೆಗಳಿಗೆ ಸ್ಪಂದಿಸದ ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ರೈತರ ಆದಾಯ ದ್ವಿಗುಣಗೊಳಿಸುವ ಭರವಸೆಯನ್ನು ಬಿಜೆಪಿ ಸರ್ಕಾರ ಈಡೇರಿಸಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್, "ಜುಮ್ಲಾಗಳು ಸಾಕು" ಈಗ ಜನತೆಗೆ ಉತ್ತರಿಸುವ ಸಮಯ ಬಂದಿದೆ.

ನವದೆಹಲಿ: ರೈತರ ಆದಾಯ ದ್ವಿಗುಣಗೊಳಿಸುವ ಭರವಸೆಯನ್ನು ಬಿಜೆಪಿ ಸರ್ಕಾರ ಈಡೇರಿಸಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್, "ಜುಮ್ಲಾಗಳು ಸಾಕು" ಈಗ ಜನತೆಗೆ ಉತ್ತರಿಸುವ ಸಮಯ ಬಂದಿದೆ ಎಂದು ಗುರುವಾರ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

16 ವರ್ಷಗಳ ಹಿಂದೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ 72 ಸಾವಿರ ಕೋಟಿ ರೂ. ಕೃಷಿ ಸಾಲ ಮತ್ತು 3.73 ಕೋಟಿ ರೂ. ರೈತರ ಬಡ್ಡಿಯನ್ನು ಮನ್ನಾ ಮಾಡಿತ್ತು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

"ಕಾಂಗ್ರೆಸ್‌ ತಾನು ನೀಡಿದ್ದ ಭರವಸೆಯನ್ನು ಈಡೇರಿಸಿದೆ. ಆದರೆ ಪ್ರಧಾನಿ ಮೋದಿ ಮೋದಿ ರೈತರಿಗೆ ಎರಡು ದೊಡ್ಡ ಭರವಸೆಗಳನ್ನು ನೀಡಿದ್ದರು. ಮೊದಲನೆಯದು, ವೆಚ್ಚ ಹಾಗೂ ಶೇ. 50 ರಷ್ಟು ಎಂಎಸ್ ಪಿ ಭರವಸೆ ಮತ್ತು ಎರಡನೆಯದು 2022ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಹೇಳಿದ್ದರು.

'ಮೋದಿಯವರ ಈ ಎರಡೂ ಖಾತರಿಗಳು' ಹುಸಿಯಾಗಿವೆ ಮತ್ತು ರೈತರ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ" ಎಂದು ಕಾಂಗ್ರೆಸ್ ಅಧ್ಯಕ್ಷರು ಹಿಂದಿಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

"ಈಗ ಕಾಂಗ್ರೆಸ್ ಮತ್ತೆ ರೈತರಿಗೆ ಭರವಸೆ ನೀಡುತ್ತಿದೆ - ನಾವು 15 ಕೋಟಿ ರೈತ ಕುಟುಂಬಗಳಿಗೆ ಎಂಎಸ್‌ಪಿಯನ್ನು ಕಾನೂನುಬದ್ಧವಾಗಿ ಜಾರಿಗೊಳಿಸುತ್ತೇವೆ. ಕಾಂಗ್ರೆಸ್ ಮಾತ್ರ ತನ್ನ ಭರವಸೆಯನ್ನು ಈಡೇರಿಸುತ್ತದೆ" ಎಂದು ಖರ್ಗೆ ಪ್ರತಿಪಾದಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

'ಅಪಾಯಕಾರಿ ಪರಿಣಾಮಕ್ಕೆ ಕಾರಣ, ಸಮಾಜ ವಿಭಜನೆ': ಜಾತಿ ತಾರತಮ್ಯದ ವಿರುದ್ಧದ ಹೊಸ UGC ನಿಯಮಗಳಿಗೆ ಸುಪ್ರೀಂ ಕೋರ್ಟ್ ತಡೆ!

ಬೆಂಗಳೂರು: 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ಕೆ.ಪಿ ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್‌

ಕೊಡಗಿನ ಯುವತಿಯರ ಜತೆ ರಾಸಲೀಲೆ; ವಿಡಿಯೋ ಮಾಡಿ, ಪ್ರಸಾರ: ಬಿಬಿಎ ವಿದ್ಯಾರ್ಥಿ ಮೊಹಮ್ಮದ್ ಬಂಧನ

ಛತ್ತೀಸ್‌ಗಢ: ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳ ಹತ್ಯೆ

SCROLL FOR NEXT