ಶರದ್ ಪವಾರ್  online desk
ದೇಶ

ಔತಣಕೂಟಕ್ಕೆ ಶಿಂಧೆ, ಫಡ್ನವೀಸ್, ಅಜಿತ್ ಗೆ ಶರದ್ ಪವಾರ್ ಆಹ್ವಾನ

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಶರದ್ ಪವಾರ್) ಅಧ್ಯಕ್ಷ ಶರದ್ ಪವಾರ್ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಡಿಸಿಎಂ ಗಳಾದ ದೇವೇಂದ್ರ ಫಡ್ನವೀಸ್, ಅಜಿತ್ ಪವಾರ್ ಅವರಿಗೆ ಔತಣ ಕೂಟಕ್ಕೆ ಆಹ್ವಾನ ನೀಡಿದ್ದಾರೆ.

ಮುಂಬೈ: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಶರದ್ ಪವಾರ್) ಅಧ್ಯಕ್ಷ ಶರದ್ ಪವಾರ್ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಡಿಸಿಎಂ ಗಳಾದ ದೇವೇಂದ್ರ ಫಡ್ನವೀಸ್, ಅಜಿತ್ ಪವಾರ್ ಅವರಿಗೆ ಔತಣ ಕೂಟಕ್ಕೆ ಆಹ್ವಾನ ನೀಡಿದ್ದಾರೆ. ಮಾ.2 ರಂದು ಬಾರಮತಿಯಲ್ಲಿ ಔತಣಕೂಟ ಆಯೋಜನೆ ಮಾಡಲಾಗಿದ್ದು, ಈ ಕೂಟದಲ್ಲಿ ಭಾಗಿಯಾಗುವಂತೆ ಶರದ್ ಪವಾರ್ ಏಕನಾಥ್ ಶಿಂಧೆ, ಡಿಸಿಎಂಗಳಾದ ದೇವೇಂದ್ರ ಫಡ್ನವೀಸ್ ಅಜಿತ್ ಪವಾರ್ ಗೆ ಆಹ್ವಾನ ನೀಡಿದ್ದಾರೆ.

ಸಿಎಂ ಶಿಂಧೆ, ಡಿಸಿಎಂ ಫಡ್ನವೀಸ್ ಹಾಗೂ ಅಜಿತ್ ಪವಾರ್ ಪುಣೆಯ ಬರಮತಿಯಲ್ಲಿರುವ ವಿದ್ಯಾ ಪ್ರತಿಷ್ಠಾನ ಕಾಲೇಜಿನಲ್ಲಿ ನಮೋ ಮಹಾರೋಜ್ಗಾರ್ ಮೇಲವದಲ್ಲಿ ಭಾಗಿಯಾಗಲಿದ್ದಾರೆ. ರಾಜಕೀಯ ಎದುರಾಳಿಗಳಿಗೆ ಶರದ್ ಪವಾರ್ ಕಳಿಸಿರುವ ಈ ಆಹ್ವಾನ ಅಚ್ಚರಿ ಮೂಡಿಸಿದೆ.

ಲೋಕಸಭೆಯಲ್ಲಿ ಶರದ್ ಪವಾರ್ ಪುತ್ರಿ ಪ್ರತಿನಿಧಿಸುತ್ತಿರುವ ಬರಮತಿ ಕ್ಷೇತ್ರದಿಂದ ಅವರ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಅಜಿತ್ ಪವಾರ್ ಅವರೊಂದಿಗೆ ಚರ್ಚೆ ನಡೆಯುತ್ತಿದೆ. ಆಹ್ವಾನ ಪತ್ರದಲ್ಲಿ ಬರಮತಿಯಲ್ಲಿ ನಡೆಯುತ್ತಿರುವ ಅಧಿಕೃತ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೆ ತಾವು ಹಾಗೂ ತಮ್ಮ ಪುತ್ರಿ ಸುಪ್ರಿಯಾ ಸುಲೆ ಆಸಕ್ತರಾಗಿರುವುದಾಗಿ ಪವಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT