ಬಿಹಾರ ಸಿಎಂ ನಿತೀಶ್‌ ಕುಮಾರ್ 
ದೇಶ

ಬಿಹಾರ: ಹಸುಗಳು, ಚಿನ್ನದ ಉಂಗುರ ಸೇರಿ ಸಿಎಂ ನಿತೀಶ್ ಕುಮಾರ್ ಆಸ್ತಿ ಮೌಲ್ಯದ 1.64 ಕೋಟಿ ರೂ.!

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಆಸ್ತಿಯನ್ನು ಇತ್ತೀಚಿಗೆ ಸಾರ್ವಜನಿಕಗೊಳಿಸಿದ್ದು, ಆ ಪ್ರಕಾರ, 1.64 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಆಸ್ತಿಯನ್ನು ಇತ್ತೀಚಿಗೆ ಸಾರ್ವಜನಿಕಗೊಳಿಸಿದ್ದು, ಆ ಪ್ರಕಾರ, 1.64 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ಭಾನುವಾರ ಸಂಜೆ ಸಂಪುಟ ಸಚಿವಾಲಯದ ವೆಬ್‌ಸೈಟ್‌ನಲ್ಲಿ ದಾಖಲಿಸಲಾದ ಮುಖ್ಯಮಂತ್ರಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳ ಆಸ್ತಿ ವಿವರಗಳ ಪ್ರಕಾರ, ನಿತೀಶ್ ಕುಮಾರ್ ಅವರ ಬಳಿ 22,552 ರೂ. ನಗದು ಮತ್ತು ವಿವಿಧ ಬ್ಯಾಂಕ್ ಖಾತೆಗಳಲ್ಲಿ 49,202 ರೂ. ಠೇವಣಿ ಹೊಂದಿದ್ದಾರೆ.

ಇದರೊಂದಿಗೆ ಅವರ ಬಳಿ 11.32 ಲಕ್ಷ ರೂ. ಮೌಲ್ಯದ ಫೋರ್ಡ್ ಇಕೋಸ್ಪೋರ್ಟ್ ಕಾರು, 1.28 ಲಕ್ಷ ರೂ. ಮೌಲ್ಯದ ಎರಡು ಚಿನ್ನದ ಉಂಗುರ ಮತ್ತು ಬೆಳ್ಳಿಯ ಉಂಗುರ ಹಾಗೂ 1.45 ಲಕ್ಷ ರೂ. ಮೌಲ್ಯದ 13 ಹಸುಗಳು ಮತ್ತು 10 ಕರುಗಳು, ಟ್ರೆಡ್‌ಮಿಲ್, ವ್ಯಾಯಾಮ ಸೈಕಲ್ ಮತ್ತು ಮೈಕ್ರೋವೇವ್ ಓವನ್ ಸೇರಿದಂತೆ ಇತರ ಚರಾಸ್ತಿಗಳನ್ನು ಹೊಂದಿದ್ದಾರೆ.

ದೆಹಲಿಯ ದ್ವಾರಕಾದಲ್ಲಿರುವ ಅಪಾರ್ಟ್‌ಮೆಂಟ್‌ ಮೌಲ್ಯ 2004ರಲ್ಲಿ 13.78 ಲಕ್ಷ ರೂ. ಇತ್ತು, ಈಗ 1.48 ಕೋಟಿ ರೂ.ಗೆ ಬೆಲೆಬಾಳುತ್ತದೆ. ಕಳೆದ ವರ್ಷ ನಿತೀಶ್ ಕುಮಾರ್ ಅವರು ತಮ್ಮ ಒಟ್ಟು ಆಸ್ತಿ 75.53 ಲಕ್ಷ ರೂ. ಎಂದು ಘೋಷಿಸಿದ್ದರು.

ಕಳೆದ ಬಾರಿಗಿಂತ ಈ ಬಾರಿ ಆಸ್ತಿ ಮೌಲ್ಯದಲ್ಲಿನ ಜಿಗಿತವು ಅವರು ದೆಹಲಿಯಲ್ಲಿನ ಅಪಾರ್ಟ್‌ಮೆಂಟ್ ಮೌಲ್ಯದ ಏರಿಕೆಯಿಂದಾಗಿ ಎಂದು ತಿಳಿದುಬಂದಿದೆ.

ನಿತೀಶ್ ಕುಮಾರ್ ಅವರ ಸರ್ಕಾರವು ಪ್ರತಿ ವರ್ಷದ ಕೊನೆಯ ದಿನದಂದು ಎಲ್ಲಾ ಕ್ಯಾಬಿನೆಟ್ ಮಂತ್ರಿಗಳು ತಮ್ಮ ಆಸ್ತಿ ಘೋಷಿಸುವುದನ್ನು ಕಡ್ಡಾಯಗೊಳಿಸಿದೆ.

ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಅವರು 2022-23ನೇ ಹಣಕಾಸು ವರ್ಷದಲ್ಲಿ ಒಟ್ಟು 4.74 ಲಕ್ಷ ರೂ. ಮೌಲ್ಯದ ಆದಾಯವನ್ನು ಹೊಂದಿದ್ದಾರೆ. ರಾಜ್ಯ ಸರ್ಕಾರದಲ್ಲಿ ಸಚಿವರೂ ಆಗಿರುವ ಅವರ ಹಿರಿಯ ಸಹೋದರ ತೇಜ್ ಪ್ರತಾಪ್ ಅವರ ಆಸ್ತಿ 3.58 ಕೋಟಿ ರೂ. ಎಂದು ಘೋಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!