ಸಾವು (ಸಾಂಕೇತಿಕ ಚಿತ್ರ) 
ದೇಶ

ಪಂಜಾಬ್ ನ ಜಲಂದರ್ ನಲ್ಲಿ ಒಂದೇ ಕುಟುಂಬದ 5 ಮಂದಿ ಸಾವು!

ಒಂದೇ ಕುಟುಂಬದ 5 ಮಂದಿ ಸಾವನ್ನಪ್ಪಿರುವ ಘಟನೆ ಪಂಜಾಬ್ ನ ಜಲಂಧರ್ ನಲ್ಲಿ ನಡೆದಿದೆ. ಅದಮ್ ಪುರ ಗ್ರಾಮದಲ್ಲಿ  ಈ ಘಟನೆ ವರದಿಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. 

ಚಂಡೀಗಢ: ಒಂದೇ ಕುಟುಂಬದ 5 ಮಂದಿ ಸಾವನ್ನಪ್ಪಿರುವ ಘಟನೆ ಪಂಜಾಬ್ ನ ಜಲಂಧರ್ ನಲ್ಲಿ ನಡೆದಿದೆ. ಅದಮ್ ಪುರ ಗ್ರಾಮದಲ್ಲಿ  ಈ ಘಟನೆ ವರದಿಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. 

59 ವರ್ಷದ ಮನ್ ಮೋಹನ್ ಸಿಂಗ್, ಅವರ ಪತ್ನಿ, ಇಬ್ಬರು ಮಕ್ಕಳು, ಮೂರು ವರ್ಷದ ಮೊಮ್ಮಗಳ ಶವ ಪತ್ತೆಯಾಗಿದೆ.

ಮನಮೋಹನ್ ಅವರ ಶವ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇತರರ ಮೃತದೇಹ ಅದೇ ಕೋಣೆಯಲ್ಲಿ ಹಾಸಿಗೆಯ ಮೇಲೆ ಪತ್ತೆಯಾಗಿದೆ. 

ಮನಮೋಹನ್ ಸಿಂಗ್ ಅವರು ಬರೆದಿರುವ ಆತ್ಮಹತ್ಯೆ ಪತ್ರದಲ್ಲಿ ಕೆಲವು ಹಣಕಾಸಿನ ಸಮಸ್ಯೆಗಳಿಂದಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿರುವುದಾಗಿ ಬರೆದಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ, ಜಲಂಧರ್ (ಗ್ರಾಮೀಣ) ಮುಖವಿಂದರ್ ಸಿಂಗ್ ಭುಲ್ಲರ್ ಹೇಳಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ ಮನಮೋಹನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತನ್ನ ಕುಟುಂಬದ ಸದಸ್ಯರನ್ನು ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ದಂಪತಿಯ ಹಿರಿಯ ಮಗಳು ತನ್ನ ಅಪ್ರಾಪ್ತ ಮಗಳೊಂದಿಗೆ ತನ್ನ ಹೆತ್ತವರ ಮನೆಗೆ ಬಂದಿದ್ದರು. ಮನಮೋಹನ್ ಅವರ ಪುತ್ರ ಮದುವೆಯಾಗಿದ್ದು, ವಿದೇಶದಲ್ಲಿ ನೆಲೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT