ಇಂದ್ರೇಶ್ ಕುಮಾರ್ 
ದೇಶ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಜೈ ಶ್ರೀರಾಮ್ ಮಂತ್ರ ಪಠಿಸಿ: ಮುಸ್ಲಿಮರಿಗೆ ಆರ್ ಎಸ್ಎಸ್ ಮನವಿ

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಜನವರಿ 22 ರಂದು ನೆರವೇರಲಿದ್ದು, ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ.

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಜನವರಿ 22 ರಂದು ನೆರವೇರಲಿದ್ದು, ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ.

ಇದೇ ವೇಳೆ ಅಯೋಧ್ಯೆಯಲ್ಲಿ ಜನವರಿ 22ರಂದು ರಾಮ ಮಂದಿರದ ಉದ್ಘಾಟನೆ ಸಮಾರಂಭದ ಸಂದರ್ಭದಲ್ಲಿ ಮಸೀದಿಗಳು, ದರ್ಗಾಗಳು ಮತ್ತು ಮದರಸಾಗಳಲ್ಲಿ ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್ ಎಂಬ ನಾಮ ಜಪಿಸುವಂತೆ ಆರ್‌ಎಸ್‌ಎಸ್‌ನ ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ಇಂದ್ರೇಶ್ ಕುಮಾರ್ ಮುಸ್ಲಿಮರಿಗೆ ಮನವಿ ಮಾಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ದೇಶದಲ್ಲಿರುವ ಶೇ 99ರಷ್ಟು ಮುಸ್ಲಿಮರು ಮತ್ತು ಇತರ ಹಿಂದೂಯೇತರರು ದೇಶಕ್ಕೆ ಸೇರಿದವರು. ನಮ್ಮೆಲ್ಲರ ಪೂರ್ವಜರು ಸಹ ಒಂದೇ. ಅವರು ತಮ್ಮ ಧರ್ಮವನ್ನು ಬದಲಾಯಿಸಿದ್ದಾರೆ, ದೇಶವನ್ನಲ್ಲ ಎಂದು ಅವರು ಹೇಳಿದ್ದಾರೆ.

ಇಸ್ಲಾಂ, ಕ್ರಿಶ್ಚಿಯನ್, ಸಿಖ್ ಅಥವಾ ಇನ್ನಾವುದೇ ಧರ್ಮಕ್ಕೆ ಸೇರಿದ ಜನರು ಶಾಂತಿ, ಸೌಹಾರ್ದತೆ ಮತ್ತು ಭ್ರಾತೃತ್ವಕ್ಕಾಗಿ ತಮ್ಮ ಧಾರ್ಮಿಕ ಸ್ಥಳಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆರ್‌ಎಸ್‌ಎಸ್ ನಾಯಕ ಮನವಿ ಮಾಡಿದರು.

ಆರ್‌ಎಸ್‌ಎಸ್-ಸಂಯೋಜಿತ ಮುಸ್ಲಿಂ ರಾಷ್ಟ್ರೀಯ ಮಂಚ್‌ನ(ಎಂಆರ್‌ಎಂ) ಮುಖ್ಯ ಪೋಷಕರೂ ಆಗಿರುವ ಕುಮಾರ್, ನಮಗೆ ಸಾಮಾನ್ಯ ಪೂರ್ವಜರು, ಸಾಮಾನ್ಯ ಮುಖಗಳು ಮತ್ತು ಸಾಮಾನ್ಯ ಕನಸಿನ ಗುರುತಿದೆ. ನಾವೆಲ್ಲರೂ ಈ ದೇಶಕ್ಕೆ ಸೇರಿದವರು, ನಮಗೆ ವಿದೇಶಿಯರೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.

‘ಎಂಆರ್‌ಎಂ ಈಗಾಗಲೇ ಮುಸ್ಲಿಮರಿಗೆ ಮನವಿ ಮಾಡಿದೆ. ನಾನು ಇಂದು ಅದನ್ನು ಪುನರುಚ್ಚರಿಸುತ್ತಿದ್ದೇನೆ. ದರ್ಗಾಗಳು, ಮದರಸಾಗಳು ಮತ್ತು ಮಸೀದಿಗಳಲ್ಲಿ 11 ಬಾರಿ 'ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್' ಎಂದು ಜಪಿಸುವಂತೆ ಮನವಿ ಮಾಡಿ ಎಂದು ಹೇಳಿದ್ದಾರೆ. ಗುರುದ್ವಾರಗಳು, ಚರ್ಚ್‌ಗಳು ಮತ್ತು ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ  ಜನವರಿ 22ರಂದು ತಮ್ಮ ಧಾರ್ಮಿಕ ಮಂದಿರಗಳನ್ನು ಸಿಂಗರಿಸಿ ಪ್ರಾರ್ಥನೆ ಸಲ್ಲಿಸಿ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT