ಸಾಂದರ್ಭಿಕ ಚಿತ್ರ 
ದೇಶ

ದೇಶದಲ್ಲಿ ಇಂದು 573 ಮಂದಿಗೆ ಕೊರೋನಾ ಪಾಸಿಟಿವ್; JN.1 ಪ್ರಕರಣಗಳ ಸಂಖ್ಯೆ 263ಕ್ಕೆ ಏರಿಕೆ

ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಳಮವಾರ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಮತ್ತು ದೇಶಾದ್ಯಂತ 573 ಮಂದಿಗೆ  ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಸಕ್ರಿಯ...

ನವದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಳಮವಾರ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಮತ್ತು ದೇಶಾದ್ಯಂತ 573 ಮಂದಿಗೆ  ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,565ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇನ್ನು ಇಂದು ನವೀಕರಿಸಿದ INSACOG ಡೇಟಾ ಪ್ರಕಾರ, ದೇಶದಲ್ಲಿ ಇದುವರೆಗೆ ಒಟ್ಟು 263 ಕೋವಿಡ್-19 ಉಪತಳಿ JN.1 ಪ್ರಕರಣಗಳು ಪತ್ತೆಯಾಗಿವೆ. ಅವುಗಳಲ್ಲಿ ಅರ್ಧದಷ್ಟು ಕೇರಳದಲ್ಲಿ ದಾಖಲಾಗಿವೆ. ಹತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ JN.1 ಪ್ರಕರಣಗಳು ವರದಿಯಾಗಿವೆ.

ಕೇರಳ (133), ಗೋವಾ (51), ಗುಜರಾತ್ (34), ದೆಹಲಿ (16), ಕರ್ನಾಟಕ (ಎಂಟು), ಮಹಾರಾಷ್ಟ್ರ (ಒಂಬತ್ತು), ರಾಜಸ್ಥಾನ (ಐದು), ತಮಿಳುನಾಡು (ನಾಲ್ಕು), ತೆಲಂಗಾಣ (ಎರಡು) ಮತ್ತು ಒಡಿಶಾ (ಒಂದು)ದಲ್ಲಿ ಕೊರೋನಾ ರೂಪಾಂತರಿ JN.1 ಪ್ರಕರಣಗಳು ಪತ್ತೆಯಾಗಿವೆ.

ಇಂದು ಬೆಳಗ್ಗೆ 8 ಗಂಟೆಗೆ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಯಲ್ಲಿ ಕೋವಿಡ್ ನಿಂದ ಕರ್ನಾಟಕದಲ್ಲಿ ಒಬ್ಬರು ಮತ್ತು ಹರಿಯಾಣದಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಡಿಸೆಂಬರ್ 5 ರವರೆಗೆ ದೈನಂದಿನ ಪ್ರಕರಣಗಳ ಸಂಖ್ಯೆ ಎರಡಂಕಿಗಳಿಗಿಂತ ಕಡಿಮೆ ಇತ್ತು. ಆದರೆ ಹೊಸ ರೂಪಾಂತರಿ ಮತ್ತು ಶೀತ ಹವಾಮಾನದ ನಂತರ ಪ್ರಕರಣಗಳು ಮತ್ತೆ ಹೆಚ್ಚಿವೆ. 2020 ರ ಆರಂಭದಲ್ಲಿ ಪ್ರಾರಂಭವಾದ ಸಾಂಕ್ರಾಮಿಕ ರೋಗದಿಂದ ನಾಲ್ಕು ವರ್ಷಗಳಲ್ಲಿ ದೇಶಾದ್ಯಂತ ಸುಮಾರು 5.3 ಲಕ್ಷಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಮತ್ತು ಸುಮಾರು 4.5 ಕೋಟಿಗೂ ಹೆಚ್ಚು ಜನ ಸೋಂಕಿಗೆ ಒಳಗಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT