ಸಾಂದರ್ಭಿಕ ಚಿತ್ರ 
ದೇಶ

ದೇಶದಲ್ಲಿ ಇಂದು 573 ಮಂದಿಗೆ ಕೊರೋನಾ ಪಾಸಿಟಿವ್; JN.1 ಪ್ರಕರಣಗಳ ಸಂಖ್ಯೆ 263ಕ್ಕೆ ಏರಿಕೆ

ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಳಮವಾರ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಮತ್ತು ದೇಶಾದ್ಯಂತ 573 ಮಂದಿಗೆ  ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಸಕ್ರಿಯ...

ನವದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಳಮವಾರ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಮತ್ತು ದೇಶಾದ್ಯಂತ 573 ಮಂದಿಗೆ  ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,565ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇನ್ನು ಇಂದು ನವೀಕರಿಸಿದ INSACOG ಡೇಟಾ ಪ್ರಕಾರ, ದೇಶದಲ್ಲಿ ಇದುವರೆಗೆ ಒಟ್ಟು 263 ಕೋವಿಡ್-19 ಉಪತಳಿ JN.1 ಪ್ರಕರಣಗಳು ಪತ್ತೆಯಾಗಿವೆ. ಅವುಗಳಲ್ಲಿ ಅರ್ಧದಷ್ಟು ಕೇರಳದಲ್ಲಿ ದಾಖಲಾಗಿವೆ. ಹತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ JN.1 ಪ್ರಕರಣಗಳು ವರದಿಯಾಗಿವೆ.

ಕೇರಳ (133), ಗೋವಾ (51), ಗುಜರಾತ್ (34), ದೆಹಲಿ (16), ಕರ್ನಾಟಕ (ಎಂಟು), ಮಹಾರಾಷ್ಟ್ರ (ಒಂಬತ್ತು), ರಾಜಸ್ಥಾನ (ಐದು), ತಮಿಳುನಾಡು (ನಾಲ್ಕು), ತೆಲಂಗಾಣ (ಎರಡು) ಮತ್ತು ಒಡಿಶಾ (ಒಂದು)ದಲ್ಲಿ ಕೊರೋನಾ ರೂಪಾಂತರಿ JN.1 ಪ್ರಕರಣಗಳು ಪತ್ತೆಯಾಗಿವೆ.

ಇಂದು ಬೆಳಗ್ಗೆ 8 ಗಂಟೆಗೆ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಯಲ್ಲಿ ಕೋವಿಡ್ ನಿಂದ ಕರ್ನಾಟಕದಲ್ಲಿ ಒಬ್ಬರು ಮತ್ತು ಹರಿಯಾಣದಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಡಿಸೆಂಬರ್ 5 ರವರೆಗೆ ದೈನಂದಿನ ಪ್ರಕರಣಗಳ ಸಂಖ್ಯೆ ಎರಡಂಕಿಗಳಿಗಿಂತ ಕಡಿಮೆ ಇತ್ತು. ಆದರೆ ಹೊಸ ರೂಪಾಂತರಿ ಮತ್ತು ಶೀತ ಹವಾಮಾನದ ನಂತರ ಪ್ರಕರಣಗಳು ಮತ್ತೆ ಹೆಚ್ಚಿವೆ. 2020 ರ ಆರಂಭದಲ್ಲಿ ಪ್ರಾರಂಭವಾದ ಸಾಂಕ್ರಾಮಿಕ ರೋಗದಿಂದ ನಾಲ್ಕು ವರ್ಷಗಳಲ್ಲಿ ದೇಶಾದ್ಯಂತ ಸುಮಾರು 5.3 ಲಕ್ಷಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಮತ್ತು ಸುಮಾರು 4.5 ಕೋಟಿಗೂ ಹೆಚ್ಚು ಜನ ಸೋಂಕಿಗೆ ಒಳಗಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT