ಅರವಿಂದ್ ಕೇಜ್ರಿವಾಲ್ 
ದೇಶ

ಲೋಕಸಭೆ ಚುನಾವಣೆಗೆ ಪ್ರಚಾರ ಮಾಡದಂತೆ ತಡೆಯಲು ಕೇಜ್ರಿವಾಲ್ ಬಂಧನಕ್ಕೆ ಬಿಜೆಪಿ ಸಂಚು: ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡದಂತೆ ತಡೆಯಲು ಬಿಜೆಪಿ ನೇತೃತ್ವದ ಕೇಂದ್ರ ಸಂಚು ರೂಪಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಬುಧವಾರ ಆರೋಪಿಸಿದೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡದಂತೆ ತಡೆಯಲು ಬಿಜೆಪಿ ನೇತೃತ್ವದ ಕೇಂದ್ರ ಸಂಚು ರೂಪಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಬುಧವಾರ ಆರೋಪಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದೆಹಲಿ ಸಿಎಂಗೆ ಮೂರನೇ ಸಮನ್ಸ್‌ ಜಾರಿ ಮಾಡಿದೆ. ಆದರೆ ಇಂದು ಸಹ ಕೇಜ್ರಿವಾಲ್ ಅವರು ವಿಚಾರೆಗೆ ಗೈರುಹಾಜರಾಗಿದ್ದು, ತಮಗೆ ನೀಡಿರುವ ನೋಟಿಸ್ ಕಾನೂನು ಬಾಹಿರ ಎಂದು ಲಿಖಿತ ಉತ್ತರ ಕಳುಹಿಸಿದ್ದಾರೆ.

ಎಎಪಿ ನಾಯಕ ಮತ್ತು ದೆಹಲಿ ಕ್ಯಾಬಿನೆಟ್ ಸಚಿವೆ ಅತಿಶಿ ಅವರು, "ರಾಜಕೀಯ" ಸೇಡಿನಿಂದ ಸಮನ್ಸ್ ನೀಡಲಾಗಿದೆ. ಕೇಜ್ರಿವಾಲ್ ಅವರನ್ನು ಏಕೆ ವಿಚಾರಣೆಗೆ ಕರೆದಿದ್ದಾರೆ ಎಂಬುದರ ಕುರಿತು ಸ್ಪಷ್ಟತೆ ಕೋರಿ ಪದೇ ಪದೇ ಲಿಖಿತವಾಗಿ ಮನವಿ ಸಲ್ಲಿಸಿದರೂ ಇಡಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದಿದ್ದಾರೆ.

ತಮಗೆ ಯಾವ ಆಧಾರದಲ್ಲಿ ಸಮನ್ಸ್ ನೀಡಲಾಗಿದೆ ಎಂದು ತಿಳಿಸುವಂತೆ ಅರವಿಂದ್ ಕೇಜ್ರಿವಾಲ್ ಅವರು ಪದೇ ಪದೇ ಇಡಿಯನ್ನು ಕೇಳಿದ್ದಾರೆ. ಅಲ್ಲದೆ ವಿಚಾರಣೆಗೆ ಸಂಬಂಧಪಟ್ಟಂತೆ ಪ್ರಶ್ನಾವಳಿಯ ರೂಪದಲ್ಲಿ ನೋಟಿಸ್ ಕಳುಹಿಸಿ. ಅದಕ್ಕೆ ಸರಿಯಾಗಿ ಉತ್ತರಿಸಲಾಗುವುದು" ಎಂದು ಕೇಳಿರುವುದಾಗಿ ಅತಿಶಿ ಹೇಳಿದ್ದಾರೆ.

ಇಡಿ ಮತ್ತು ಸಿಬಿಐ ಅನ್ನು ಭಾರತೀಯ ಜನತಾ ಪಕ್ಷ, ವಿರೋಧ ಪಕ್ಷದ ನಾಯಕರ ಮೇಲೆ ದಾಳಿ ಮಾಡಲು ರಾಜಕೀಯ ಸಾಧನವಾಗಿ ಬಳಸಿಕೊಳ್ಳುತ್ತಿದೆ ಎಂದು ದೆಹಲಿ ಸಚಿವೆ ಆರೋಪಿಸಿದ್ದಾರೆ.

“ಬಿಜೆಪಿ ಅಬಕಾರಿ ನೀತಿ ಪ್ರಕರಣವನ್ನು ಇಡಿ ಮೂಲಕ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಮತ್ತು ಕೇಜ್ರಿವಾಲ್ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡದಂತೆ ತಡೆಯಲು ಪ್ರಯತ್ನಿಸುತ್ತಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT