ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತ ಆರೋಪಿ ನೀಲಂ ಆಜಾದ್, ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ 
ದೇಶ

ಸಂಸತ್ತಿನ ಭದ್ರತಾ ಲೋಪ ಪ್ರಕರಣ: ಪೊಲೀಸ್ ಕಸ್ಟಡಿ ವಿರುದ್ಧ ಸಲ್ಲಿಸಿದ್ದ ನೀಲಂ ಆಜಾದ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಡಿಸೆಂಬರ್ 13 ರಂದು ಬಂಧಿತರಾಗಿರುವ ಆರೋಪಿ ನೀಲಂ ಆಜಾದ್ ತನ್ನ ಪೊಲೀಸ್ ಕಸ್ಟಡಿ ಕಾನೂನುಬಾಹಿರ ಎಂಬ ಕಾರಣಕ್ಕಾಗಿ ತನ್ನನ್ನು ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

ನವದೆಹಲಿ: ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಡಿಸೆಂಬರ್ 13 ರಂದು ಬಂಧಿತರಾಗಿರುವ ಆರೋಪಿ ನೀಲಂ ಆಜಾದ್ ತನ್ನ ಪೊಲೀಸ್ ಕಸ್ಟಡಿ ಕಾನೂನುಬಾಹಿರ ಎಂಬ ಕಾರಣಕ್ಕಾಗಿ ತನ್ನನ್ನು ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ನೇತೃತ್ವದ ಪೀಠವು ಅರ್ಜಿಯನ್ನು ನಿರ್ವಹಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

'ಅರ್ಜಿದಾರರು ಈಗಾಗಲೇ ವಿಚಾರಣಾ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ, ಈ ಅರ್ಜಿಯನ್ನು ಮಾನ್ಯ ಮಾಡಲು ಸಾಧ್ಯವಿಲ್ಲ ಮತ್ತು ಅದರ ಪ್ರಕಾರ ವಜಾಗೊಳಿಸಲಾಗಿದೆ' ಎಂದು ನ್ಯಾಯಮೂರ್ತಿ ಮನೋಜ್ ಜೈನ್ ಅವರನ್ನೊಒಳಗೊಂಡ ಪೀಠ ಹೇಳಿದೆ.

ವಿಚಾರಣಾ ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ ಆಕೆಯನ್ನು ಸಮರ್ಥಿಸಿಕೊಳ್ಳಲು ಅವರ ಆಯ್ಕೆಯ ವಕೀಲರನ್ನು ಸಂಪರ್ಕಿಸಲು ಆಕೆಗೆ ಅವಕಾಶವಿಲ್ಲದ ಕಾರಣ ಪೊಲೀಸ್ ಕಸ್ಟಡಿಯು ಸಂವಿಧಾನದ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂದು ನೀಲಂ ಆಜಾದ್ ಅವರ ವಕೀಲರು ವಾದಿಸಿದರು.

ವಿಚಾರಣೆಯ ಸಂದರ್ಭದಲ್ಲಿ, ಆಕೆಯ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿರುವುದು ಕಂಡುಬಂದಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಆಜಾದ್ ತನ್ನ ಆಯ್ಕೆಯ ವಕೀಲರನ್ನು ಸಂಪರ್ಕಿಸಲು ಅವಕಾಶ ನೀಡದಿರುವುದು ಆಕೆಯ ಸಂವಿಧಾನದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ರಿಮಾಂಡ್ ಆದೇಶವನ್ನು ಕಾನೂನುಬಾಹಿರವಾಗಿಸುತ್ತದೆ ಎಂದು ಆಕೆಯ ಅರ್ಜಿಯಲ್ಲಿ ದೂರಲಾಗಿದೆ.
ವಿಚಾರಣಾ ನ್ಯಾಯಾಲಯ ಆಕೆಯನ್ನು ಜನವರಿ 5ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಡಿಸೆಂಬರ್ 21 ರಂದು, ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತರಾದ ನೀಲಂ ಆಜಾದ್ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿಯನ್ನು ವಿಚಾರಣಾ ನ್ಯಾಯಾಲಯವು ಜನವರಿ 5 ರವರೆಗೆ ವಿಸ್ತರಿಸಿತು. ಪಿತೂರಿಯಲ್ಲಿ ಭಾಗಿಯಾಗಿರುವ ಎಲ್ಲರನ್ನು ಬಹಿರಂಗಪಡಿಸಬೇಕಾಗಿದೆ ಎಂದು ದೆಹಲಿ ಪೊಲೀಸರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT